ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಕುಟುಂಬವನ್ನು ಪದೇ ಪದೇ ಎಳೆಯಬೇಡಿ. ಹುಣಸೂರು, ಕೆ.ಆರ್.ಪೇಟೆ ಸೇರಿ ಉಳಿದ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳಿದ್ದಾರೆ. ಆದರೂ ಪ್ರಜ್ವಲ್, ನಿಖಿಲ್ ಹೆಸರನ್ನು ಯಾರೋ ತೇಲಿ ಬಿಟ್ಟಿದ್ದಾರೆ. ಈ ರೀತಿಯ ಕಪೋಲಕಲ್ಪಿತ ಸುದ್ದಿಗಳನ್ನು ಯಾರೂ ಮಾಡಬೇಡಿ’ ಎಂದು ಮನವಿ ಮಾಡಿದರು.