ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಮಾತನಾಡಿ, ನಿಫಾ ವೈರಸ್ ಸೋಂಕು ತಡೆಗಟ್ಟಲು ಹೆಚ್ಚಾಗಿ ಅಂಗನವಾಡಿ, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಈ ಬಗ್ಗೆ ಪ್ರತಿ ಮನೆ ಮನೆಗೂ ಕರಪತ್ರಗಳು ತಲುಪಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಮಾತನಾಡಿ, ಬಾವಲಿಗಳು ಬಿಸಾಡಿದ ಹಣ್ಣು ಸೇವಿಸುವುದರ ಮೂಲಕ ಇತರೆ ಪ್ರಾಣಿಗಳಿಗೆ, ಸೋಂಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಮತ್ತು ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸುವುದರಿಂದ ರೋಗ ಮನುಷ್ಯರಿಗೆ ಹರಡಲಿದೆ. ಸೋಂಕಿತ ರೋಗಿಗಳಿಗೆ ಆಸ್ಪತ್ರೆ ಸಿಬ್ಬಂದಿ ವಿಶೇಷ ಆರೈಕೆ ವೇಳೆ ಮಾಸ್ಕ್ ಉಪಯೋಗಿಸಬೇಕು. ಸಾರ್ವಜನಿಕರು ಈ ಬಗ್ಗೆ ಎಚ್ಚರ ಹಾಗೂ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ವಿವರಿಸಿದರು.