<p><strong>ಚನ್ನರಾಯಪಟ್ಟಣ: </strong>ಪಟ್ಟಣದ ನವೋದಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಐಶ್ವರ್ಯಾ, ಕೇಂದ್ರ<br />ಮಾನವ ಸಂಪನ್ಮೂಲ ಇಲಾಖೆ ಆಯೋಜಿಸುವ ಎನ್ಎಂಎಂಎಸ್ (ನ್ಯಾಷನಲ್ ಮೀನ್ಸ್ ಕಮ್<br />ಮೆರಿಟ್ ಸ್ಕಾಲರ್ ಶಿಪ್) ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ್ದಾರೆ.</p>.<p>8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ ಎಂಎಂಎಸ್ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಇದೆ. 2019- 20ನೇ ಸಾಲಿಗೆ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಈಕೆಪರೀಕ್ಷೆ ತೆಗೆದುಕೊಂಡು ಯಶಸ್ಸು ಸಾಧಿಸಿದ್ದಾಳೆ. ಸದ್ಯ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ.</p>.<p>ಗ್ರಾಮೀಣ ಪ್ರತಿಭೆ ಐಶ್ವರ್ಯಾ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ. ಪ್ರತಿ ವರ್ಷ ₹ 12 ಸಾವಿರ ವಿದ್ಯಾರ್ಥಿ ವೇತನ ಬರುತ್ತದೆ. ದ್ವಿತೀಯ ಪಿಯುವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿದ್ದಾಳೆ.</p>.<p>‘ಪರೀಕ್ಷೆ ತೇರ್ಗಡೆಯಾಗಲು ಶಾಲೆಯ ಶಿಕ್ಷಕರು ನೀಡಿದ ಮಾರ್ಗದರ್ಶನ, ತರಬೇತಿ ಸಹಕಾರಿಯಾಯಿತು. ಪೋಷಕರ ಸಹಕಾರ ಮರೆಯುವಂತಿಲ್ಲ. ವಿದ್ಯಾರ್ಥಿ ವೇತನದಲ್ಲಿ ಪಠ್ಯಕ್ಕೆ ಪೂರಕವಾದಪುಸ್ತಕ ಖರೀದಿಸುತ್ತಿ ದ್ದೇನೆ. ಈ ವರ್ಷ ಎನ್ಟಿಎಸ್ಇ (ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ) ತೆಗೆದುಕೊಳ್ಳುತ್ತೇನೆ. ಅದರಲ್ಲಿ ಅರ್ಹತೆ ಪಡೆದರೆ ಪದವಿವರೆಗೆ ವಿದ್ಯಾರ್ಥಿ ವೇತನ ಬರುತ್ತದೆ. ಪದವಿತೇರ್ಗಡೆಯಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ ಪೊಲೀಸ್ ಅಧಿಕಾರಿಯಾಗುವ ಆಶಯ ಇದೆ’ ಎಂದು ಐಶ್ವರ್ಯಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ: </strong>ಪಟ್ಟಣದ ನವೋದಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಐಶ್ವರ್ಯಾ, ಕೇಂದ್ರ<br />ಮಾನವ ಸಂಪನ್ಮೂಲ ಇಲಾಖೆ ಆಯೋಜಿಸುವ ಎನ್ಎಂಎಂಎಸ್ (ನ್ಯಾಷನಲ್ ಮೀನ್ಸ್ ಕಮ್<br />ಮೆರಿಟ್ ಸ್ಕಾಲರ್ ಶಿಪ್) ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ್ದಾರೆ.</p>.<p>8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ ಎಂಎಂಎಸ್ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಇದೆ. 2019- 20ನೇ ಸಾಲಿಗೆ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಈಕೆಪರೀಕ್ಷೆ ತೆಗೆದುಕೊಂಡು ಯಶಸ್ಸು ಸಾಧಿಸಿದ್ದಾಳೆ. ಸದ್ಯ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ.</p>.<p>ಗ್ರಾಮೀಣ ಪ್ರತಿಭೆ ಐಶ್ವರ್ಯಾ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ. ಪ್ರತಿ ವರ್ಷ ₹ 12 ಸಾವಿರ ವಿದ್ಯಾರ್ಥಿ ವೇತನ ಬರುತ್ತದೆ. ದ್ವಿತೀಯ ಪಿಯುವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿದ್ದಾಳೆ.</p>.<p>‘ಪರೀಕ್ಷೆ ತೇರ್ಗಡೆಯಾಗಲು ಶಾಲೆಯ ಶಿಕ್ಷಕರು ನೀಡಿದ ಮಾರ್ಗದರ್ಶನ, ತರಬೇತಿ ಸಹಕಾರಿಯಾಯಿತು. ಪೋಷಕರ ಸಹಕಾರ ಮರೆಯುವಂತಿಲ್ಲ. ವಿದ್ಯಾರ್ಥಿ ವೇತನದಲ್ಲಿ ಪಠ್ಯಕ್ಕೆ ಪೂರಕವಾದಪುಸ್ತಕ ಖರೀದಿಸುತ್ತಿ ದ್ದೇನೆ. ಈ ವರ್ಷ ಎನ್ಟಿಎಸ್ಇ (ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ) ತೆಗೆದುಕೊಳ್ಳುತ್ತೇನೆ. ಅದರಲ್ಲಿ ಅರ್ಹತೆ ಪಡೆದರೆ ಪದವಿವರೆಗೆ ವಿದ್ಯಾರ್ಥಿ ವೇತನ ಬರುತ್ತದೆ. ಪದವಿತೇರ್ಗಡೆಯಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ ಪೊಲೀಸ್ ಅಧಿಕಾರಿಯಾಗುವ ಆಶಯ ಇದೆ’ ಎಂದು ಐಶ್ವರ್ಯಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>