‘ಹಾಲಿ ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ ಹಿರಿಯ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದೇನೆ.ನನಗೆ ಕಾರ್ಯಕರ್ತರು ಟಿಕೆಟ್ ಕೊಡಿ ಎಂದು ಕೇಳಲು ಹೋಗಿಲ್ಲ. ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಶೇ 70ರಷ್ಟು ಕಾರ್ಯಕರ್ತರು ಭವಾನಿ ಅಮ್ಮನಿಗೆ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಅವರು ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿ ಕೆಲಸ ಮಾಡಿದ್ದಾರೆ. ಎರಡು, ಮೂರು ದಿನ ಸಮಯ ಇದ್ದು, ಯಾವಾಗ ಬೇಕಾದರೂ ಅಭ್ಯರ್ಥಿ ಹೆಸರು ಘೋಷಣೆ ಮಾಡಬಹುದು’ ಎಂದು ಹೇಳಿದರು.