ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನೈತಿಕ ಪೊಲೀಸ್‌ ಗಿರಿಗೆ ಅವಕಾಶವಿಲ್ಲ: ಡಿಜಿಪಿ

Last Updated 6 ನವೆಂಬರ್ 2021, 15:14 IST
ಅಕ್ಷರ ಗಾತ್ರ

ಹಾಸನ: ‘ಕಾನೂನು ಭಂಗ ಮಾಡುವುದು ಕಂಡು ಬಂದರೇ ಪೊಲೀಸರಿಗೆ ತಿಳಿಸಬೇಕು.ಅನೈತಿಕ ಪೊಲೀಸ್‌ ಗಿರಿ ಮಾಡಲು ಅವಕಾಶವಿಲ್ಲ’ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದರು.

ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾನೂನು ಪ್ರಕಾರವೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ.ಅಪರಾಧ ನಡೆಯುತ್ತಿರುವುದು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ತಾವಾಗಿಯೇ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

‘ರಾಜ್ಯದ ಪೊಲೀಸರಿಗೆ ಸರಿಯಾದ ವೇತನ ನೀಡಲಾಗುತ್ತಿದೆ. ಆರೋಗ್ಯ ಭಾಗ್ಯ ಸೇರಿದಂತೆ ಇತರೆ ಹಲವು ನೆರವು ನೀಡಲಾಗುತ್ತಿದೆ. ಪೊಲೀಸ್ ವಸತಿಗೃಹ ಮೇಲ್ದರ್ಜೆಗೇರಿಸುವ ಹಾಗೂ ಪೊಲೀಸರ ಆರೋಗ್ಯರಕ್ಷಣೆ ಕುರಿತು ರಾಜ್ಯ ಸರ್ಕಾರ ಹಲವು ನೆರವು ನೀಡುತ್ತಿದೆ’ ಎಂದು ಹೇಳಿದರು.

‘ನಾಡಿನ ಸಮಸ್ತ ಜನರಿಗೆ ಆರೋಗ್ಯ, ನೆಮ್ಮದಿ ಕರುಣಿಸುವಂತೆ ಪ್ರಾರ್ಥಿಸಿದ್ದೇನೆ. ಜಿಲ್ಲಾಡಳಿತ ದೇವಿಯ ದರ್ಶನಕ್ಕೆ ಅಚ್ಚುಕಟ್ಟಾಗಿ ವ್ಯವಸ್ಥೆ ಕೈಗೊಂಡಿದೆ’ ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಬಿ.ಎನ್‌. ನಂದಿನಿ, ಡಿವೈಎಸ್ಪಿ ಉದಯಭಾಸ್ಕರ್, ಸರ್ಕಲ್‌ ಇನ್‌ಸ್ಪೆಕ್ಟರ್‌ ವಸಂತ ಕುಮಾರ್, ಸುರೇಶ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT