ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ತೊಂದರೆ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೂ ಹಿನ್ನೆಡೆಯಾಗಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ನಂಬಿ ಬಿಜೆಪಿ ಸೇರ್ಪಡೆಯಾಗಿದ್ದೇವೆ ಹೊರತು ಬೇರೆ ಯಾರನ್ನೂ ನಂಬಿ ಬಂದಿಲ್ಲ. ನಾವು ಬಿಜೆಪಿಯಲ್ಲಿ ಸಂತೋಷವಾಗಿದ್ದೇವೆ ಎಂದರು.