<p><strong>ಹಾಸನ: </strong>ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ₹ 104 ಕೋಟಿ ಮೊತ್ತದ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಪ್ರಸ್ತಾವನೆ ಸಲ್ಲಿಸಿದರೂ ಇದುವರೆಗೂ ಪರಿಹಾರ ಹಣ ಬಿಡುಗಡೆಯಾಗಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ದೂರಿದರು.</p>.<p>ಜಿಲ್ಲೆಯಲ್ಲಿ 8245 ಎಕರೆಯಲ್ಲಿ ತರಕಾರಿ, 1480 ಎಕರೆ ವ್ಯಾಪ್ತಿಯಲ್ಲಿ ವಿವಿಧ ಹಣ್ಣು ಬೆಳೆ, 342 ಎಕರೆಯಲ್ಲಿ ಹೂವು ಬೆಳೆಯಲಾಗಿದ್ದು, ಕೊರೊನಾ ಲಾಕ್ಡೌನ್ನಿಂದ ಸಾರಿಗೆ ಸಂಪರ್ಕ, ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಸಿಗದೆ ನಷ್ಟವುಂಟಾಗಿದೆ. ಆದರೆ, ಎನ್ಡಿಆರ್ಎಫ್ ಮಾರ್ಗಸೂಚಿ ಅನ್ವಯ ₹ 19.23 ಕೋಟಿ ಎಂದು ಪರಿಗಣಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.</p>.<p>30 ರೈತರಿಗೆ ₹ 7.59 ಲಕ್ಷ ಮಾತ್ರ ಬಿಡುಗಡೆಯಾಗಿದೆ. ಅರ್ಹ ಫಲಾನುಭವಿಗಳು ಪರಿಹಾರಕ್ಕಾಗಿ ಕಚೇರಿಯಲ್ಲಿ ಪ್ರಶ್ನಿಸಿದರೆ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಜೋಡಣೆಯಾಗಿಲ್ಲ ಎಂಬ ಉತ್ತರ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸಬೇಕೆಂಬ ಮನವಿಗೆ ಸ್ಪಂದಿಸಿಲ್ಲ. ಮಧ್ಯವರ್ತಿಗಳನ್ನು ರೈತರಿಂದ ನೇರವಾಗಿ ಖರೀದಿಸಿದರೆ ಅನುಕೂಲವಾಗುತ್ತದೆ. ಕೆಎಂಎಫ್ ಸಹ ಕ್ವಿಂಟಾಲ್ಗೆ ₹ 1750 ನಂತೆ ಮೆಕ್ಕೆಜೋಳ ಪಡೆಯುವಂತೆ ಆದೇಶಿಸಬೇಕು. ಹಾಸನದಲ್ಲಿ ಈ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ತಿಳಿಸಿದರು.</p>.<p>ಕೊರೊನಾದಿಂದ ಹಾಲಿನ ಉಪಉತ್ಪನ್ನಗಳು ಮಾರಾಟವಾಗದೆ ತೊಂದರೆಯಾಗಿದೆ. ಹಾಸನ ಹಾಲು ಒಕ್ಕೂಟದಲ್ಲಿ ₹ 150 ಕೋಟಿ ಮೊತ್ತದ ಉತ್ಪನ್ನಗಳು ದಾಸ್ತಾನಿದೆ. 4200 ಟನ್ ಹಾಲಿನ ಪೌಡರ್ ಉಳಿದಿದೆ. ನಿತ್ಯ 11.30 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಬೇಡಿಕೆ ಕುಸಿದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ₹ 104 ಕೋಟಿ ಮೊತ್ತದ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಪ್ರಸ್ತಾವನೆ ಸಲ್ಲಿಸಿದರೂ ಇದುವರೆಗೂ ಪರಿಹಾರ ಹಣ ಬಿಡುಗಡೆಯಾಗಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ದೂರಿದರು.</p>.<p>ಜಿಲ್ಲೆಯಲ್ಲಿ 8245 ಎಕರೆಯಲ್ಲಿ ತರಕಾರಿ, 1480 ಎಕರೆ ವ್ಯಾಪ್ತಿಯಲ್ಲಿ ವಿವಿಧ ಹಣ್ಣು ಬೆಳೆ, 342 ಎಕರೆಯಲ್ಲಿ ಹೂವು ಬೆಳೆಯಲಾಗಿದ್ದು, ಕೊರೊನಾ ಲಾಕ್ಡೌನ್ನಿಂದ ಸಾರಿಗೆ ಸಂಪರ್ಕ, ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಸಿಗದೆ ನಷ್ಟವುಂಟಾಗಿದೆ. ಆದರೆ, ಎನ್ಡಿಆರ್ಎಫ್ ಮಾರ್ಗಸೂಚಿ ಅನ್ವಯ ₹ 19.23 ಕೋಟಿ ಎಂದು ಪರಿಗಣಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.</p>.<p>30 ರೈತರಿಗೆ ₹ 7.59 ಲಕ್ಷ ಮಾತ್ರ ಬಿಡುಗಡೆಯಾಗಿದೆ. ಅರ್ಹ ಫಲಾನುಭವಿಗಳು ಪರಿಹಾರಕ್ಕಾಗಿ ಕಚೇರಿಯಲ್ಲಿ ಪ್ರಶ್ನಿಸಿದರೆ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಜೋಡಣೆಯಾಗಿಲ್ಲ ಎಂಬ ಉತ್ತರ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸಬೇಕೆಂಬ ಮನವಿಗೆ ಸ್ಪಂದಿಸಿಲ್ಲ. ಮಧ್ಯವರ್ತಿಗಳನ್ನು ರೈತರಿಂದ ನೇರವಾಗಿ ಖರೀದಿಸಿದರೆ ಅನುಕೂಲವಾಗುತ್ತದೆ. ಕೆಎಂಎಫ್ ಸಹ ಕ್ವಿಂಟಾಲ್ಗೆ ₹ 1750 ನಂತೆ ಮೆಕ್ಕೆಜೋಳ ಪಡೆಯುವಂತೆ ಆದೇಶಿಸಬೇಕು. ಹಾಸನದಲ್ಲಿ ಈ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ತಿಳಿಸಿದರು.</p>.<p>ಕೊರೊನಾದಿಂದ ಹಾಲಿನ ಉಪಉತ್ಪನ್ನಗಳು ಮಾರಾಟವಾಗದೆ ತೊಂದರೆಯಾಗಿದೆ. ಹಾಸನ ಹಾಲು ಒಕ್ಕೂಟದಲ್ಲಿ ₹ 150 ಕೋಟಿ ಮೊತ್ತದ ಉತ್ಪನ್ನಗಳು ದಾಸ್ತಾನಿದೆ. 4200 ಟನ್ ಹಾಲಿನ ಪೌಡರ್ ಉಳಿದಿದೆ. ನಿತ್ಯ 11.30 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಬೇಡಿಕೆ ಕುಸಿದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>