ಹಾಸನ ಜಿಲ್ಲೆಯ ಬೇಲೂರಿನಿಂದ ಚಿಕ್ಕಮಗಳೂರಿಗೆ ನಿತ್ಯ ಕೆಎಸ್ಆರ್ಟಿಸಿ ಬಸ್ಗಾಗಿ ಪರದಾಡುತ್ತಿರುವ ವಿದ್ಯಾರ್ಥಿಗಳು, ನೌಕರರು ಶುಕ್ರವಾರ ಬೇಲೂರು ಬಸ್ ನಿಲ್ದಾಣದಲ್ಲಿ ಸುಮಾರು ಒಂದೂವರೆ ಗಂಟೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ಬಸ್ ತೊಂದರೆ ಇದ್ದು, ಪರೀಕ್ಷಾ ಸಮಯದಲ್ಲಿ ನಮಗೆ ಹೆಚ್ಚುವರಿಯಾಗಿ ಇಲ್ಲವೇ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಈ ಮೊದಲೇ ಮನವಿ ಮಾಡಲಾಗಿತ್ತು. ಅಧಿಕಾರಿಗಳೂ ನಮ್ಮ ಪರದಾಟವನ್ನು ನೋಡುತ್ತಲೇ ಇದ್ದಾರೆ. ಆದರೂ ಮೂಕಪ್ರೇಕ್ಷಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.