<p><strong>ಹಾಸನ: </strong>ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗಿಲ್ಲ. ಜಿಲ್ಲೆಯಲ್ಲಿ ಈವರೆಗೂ ಲಸಿಕೆ<br />ಪಡೆದವರು ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಕುಮಾರ್ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು,<br />ಕೋವಿಡ್ ಎರಡನೇ ಅಲೆ ತಡೆಯಲು ಲಸಿಕೆ ಪಡೆಯಬೇಕು. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳಲ್ಲಿ<br />ಯಾವುದೇ ವ್ಯತ್ಯಾಸವಿಲ್ಲ. ಲಸಿಕೆ ಪಡೆದವರಲ್ಲಿ ಮೈಕೈ ನೋವು ಮತ್ತು ಜ್ವರ ಬರಬಹುದು ಎಂದು<br />ವಿವರಿಸಿದರು.</p>.<p>ಗರ್ಭಿಣಿಯರು, ಹಾಲುಣಿಸುವ ತಾಯಂದಿರು, 18 ವರ್ಷ ಒಳಗಿನ ಮಕ್ಕಳು ಮತ್ತು ಕೋವಿಡ್ ಸೋಂಕಿತರಿಗೆ<br />ಲಸಿಕೆ ನೀಡುವಂತಿಲ್ಲ ಎಂದು ಸರ್ಕಾರದ ಆದೇಶವಿದೆ. ಏಕೆಂದರೆ ಅವರ ಮೇಲೆ ಇನ್ನೂ ಪ್ರಯೋಗ ಮಾಡಿಲ್ಲ<br />ಎಂದರು.</p>.<p>ತಾಲ್ಲೂಕಿನಲ್ಲಿ 4 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದು, ಅಂಕಪುರದ ಒಬ್ಬ ವ್ಯಕ್ತಿ ಸರ್ಕಾರಿ ಆಸ್ಪತ್ರೆಯಲ್ಲಿ<br />ಚಿಕಿತ್ಸೆ ಪಡೆಯದೆ ಮೃತಪಟ್ಟರು. ಉಳಿದ ಮೂರು ಪ್ರಕರಣ ಮಂಗಳೂರಿನವರು. ಕಳೆದ ವರ್ಷಕ್ಕೆ ಹೋಲಿಸಿದರೆ<br />ಈ ಬಾರಿ ಕೋವಿಡ್ ಕಾರಣದಿಂದ ಡೆಂಗಿ ಮತ್ತು ಚಿಕೂನ್ ಗುನ್ಯ ಪ್ರಕರಣಗಳು ತೀರ ಕಡಿಮೆಯಾಗಿವೆ ಎಂದು<br />ತಿಳಿಸಿದರು.</p>.<p>ಕೋವಿಡ್ ಕಾರಣದಿಂದ ನಿಲ್ಲಿಸಿದ್ದ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ಮತ್ತೆ ಆರಂಭಿಸಲಾಗಿದೆ. ಮೂರು ತಿಂಗಳಿಗೊಮ್ಮೆ<br />ಕುಡಿಯುವ ನೀರಿನ ಮಾದರಿ ಪರೀಕ್ಷೆ ಮಾಡಲಾಗುತ್ತಿದೆ. ಅಲ್ಲದೇ ತಾಲ್ಲೂಕಿನಲ್ಲಿ ಎಲ್ಲಿಯೂ ಹಕ್ಕಿಜ್ವರ ಕಂಡು<br />ಬಂದಿಲ್ಲ. ಹಾಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಇಲಾಖೆ ವತಿಯಿಂದ ಅಗತ್ಯ ಮುಂಜಾಗ್ರತೆ<br />ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಸದಸ್ಯ ಸತೀಶ್ ಮಾತನಾಡಿ, ಕಾರ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ತೊಂದರೆ<br />ಅನುಭವಿಸುತ್ತಿದ್ದು, ಕೂಡಲೇ ತಾತ್ಕಾಲಿಕವಾಗಿಯಾದರೂ ಒಬ್ಬರನ್ನು ನೇಮಕ ಮಾಡಬೇಕೆಂದು<br />ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿಎಚ್ಒ, ಗುರುವಾರದಿಂದಲೇ ಒಬ್ಬ ವೈದ್ಯರನ್ನು<br />ನಿಯೋಜಿಸಲಾಗುವುದು ಎಂದರು.</p>.<p>‘ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳು ಪ್ರಾರಂಭವಾಗಿವೆ. ಅಂತಿಮ ಪದವಿ, ದ್ವಿತೀಯ ಪಿಯುಸಿ ಹಾಗೂ<br />ಎಸ್ಸೆಸ್ಸೆಲ್ಸಿ ಸೇರಿ 800 ವಿದ್ಯಾರ್ಥಿಗಳಿಗೆ ಈಗಾಗಲೇ ಅವಕಾಶ ಮಾಡಿಕೊಡಲಾಗಿದೆ. ಹೊಸ ದಾಖಲಾತಿಗೆ<br />ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಒಂದು ಬಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೋವಿಡ್<br />ಪರೀಕ್ಷೆ ಮಾಡಿಸಿದ್ದು, ಯಾರಿಗೂ ಪಾಸಿಟಿವ್ ಪತ್ತೆಯಾಗಿಲ್ಲ. ವಿದ್ಯಾರ್ಥಿ ನಿಲಯಗಳೇ ಕ್ವಾರಂಟೈನ್<br />ಕೇಂದ್ರವಾಗಿದ್ದರಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ<br />ಸಹಾಯಕ ನಿರ್ದೇಶಕ ಎಚ್.ಎಂ.ಸತೀಶ್ ತಿಳಿಸಿದರು.</p>.<p>ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಸ್. ರವಿ ಮಾತನಾಡಿ, ಆಲೂಗಡ್ಡೆ ಬಿತ್ತನೆ ಬೀಜವನ್ನು<br />ಪಂಜಾಬ್ನ ಜಲಂದರ್ನಿಂದ ತರಿಸಲಾಗುತ್ತಿತ್ತು. ಆದರೆ ಈಗ ಸೋಮನಹಳ್ಳಿ ಕಾವಲಿನಲ್ಲಿ ‘ಕುಪ್ರಿ ಜ್ಯೋತಿ’<br />ಮತ್ತು ‘ಕುಪ್ರಿ ಹಿಮಾಲಿನಿ’ ಎಂಬ ಎರಡು ತಳಿ ಆಲೂಗಡ್ಡೆ ಅಂಗಾಂಶ ಕೃಷಿ ಮಾಡಲಾಗಿದೆ. ಇದರಲ್ಲಿ ಕುಪ್ರಿ<br />ಹಿಮಾಲಿನಿ ಉತ್ತಮವಾಗಿ ಬಂದಿದ್ದು, ಗಡ್ಡೆ ಬಿಡಲು ಪ್ರಾರಂಭವಾಗಿದೆ. ಅಂಗಾಂಶ ಕೃಷಿ ಮುಖಾಂತರ ಎಕರೆಗೆ 35 ಸಾವಿರ ಹಾಗೂ ಹೆಕ್ಟೇರ್ಗೆ 1 ಲಕ್ಷ ಆಲೂಗಡ್ಡೆ ಸಸಿ ಅಗತ್ಯವಿದೆ. ವಿಯಾಟ್ನಂ ತಂತ್ರಜ್ಞಾನ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಜಿಲ್ಲೆ ಆಲೂಗಡ್ಡೆ ಬಿತ್ತನೆ ಬೀಜದಲ್ಲಿ ಸ್ವಾವಲಂಬಿಯಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಎಚ್.ಕೆ.ರಂಜಿನಿ, ಉಪಾಧ್ಯಕ್ಷೆ ಬೇಬಿ, ಕಾರ್ಯನಿರ್ವಾಹಕ ಅಧಿಕಾರಿ<br />ಕೆ.ಎಲ್. ಯಶ್ವಂತ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗಿಲ್ಲ. ಜಿಲ್ಲೆಯಲ್ಲಿ ಈವರೆಗೂ ಲಸಿಕೆ<br />ಪಡೆದವರು ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಕುಮಾರ್ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು,<br />ಕೋವಿಡ್ ಎರಡನೇ ಅಲೆ ತಡೆಯಲು ಲಸಿಕೆ ಪಡೆಯಬೇಕು. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳಲ್ಲಿ<br />ಯಾವುದೇ ವ್ಯತ್ಯಾಸವಿಲ್ಲ. ಲಸಿಕೆ ಪಡೆದವರಲ್ಲಿ ಮೈಕೈ ನೋವು ಮತ್ತು ಜ್ವರ ಬರಬಹುದು ಎಂದು<br />ವಿವರಿಸಿದರು.</p>.<p>ಗರ್ಭಿಣಿಯರು, ಹಾಲುಣಿಸುವ ತಾಯಂದಿರು, 18 ವರ್ಷ ಒಳಗಿನ ಮಕ್ಕಳು ಮತ್ತು ಕೋವಿಡ್ ಸೋಂಕಿತರಿಗೆ<br />ಲಸಿಕೆ ನೀಡುವಂತಿಲ್ಲ ಎಂದು ಸರ್ಕಾರದ ಆದೇಶವಿದೆ. ಏಕೆಂದರೆ ಅವರ ಮೇಲೆ ಇನ್ನೂ ಪ್ರಯೋಗ ಮಾಡಿಲ್ಲ<br />ಎಂದರು.</p>.<p>ತಾಲ್ಲೂಕಿನಲ್ಲಿ 4 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದು, ಅಂಕಪುರದ ಒಬ್ಬ ವ್ಯಕ್ತಿ ಸರ್ಕಾರಿ ಆಸ್ಪತ್ರೆಯಲ್ಲಿ<br />ಚಿಕಿತ್ಸೆ ಪಡೆಯದೆ ಮೃತಪಟ್ಟರು. ಉಳಿದ ಮೂರು ಪ್ರಕರಣ ಮಂಗಳೂರಿನವರು. ಕಳೆದ ವರ್ಷಕ್ಕೆ ಹೋಲಿಸಿದರೆ<br />ಈ ಬಾರಿ ಕೋವಿಡ್ ಕಾರಣದಿಂದ ಡೆಂಗಿ ಮತ್ತು ಚಿಕೂನ್ ಗುನ್ಯ ಪ್ರಕರಣಗಳು ತೀರ ಕಡಿಮೆಯಾಗಿವೆ ಎಂದು<br />ತಿಳಿಸಿದರು.</p>.<p>ಕೋವಿಡ್ ಕಾರಣದಿಂದ ನಿಲ್ಲಿಸಿದ್ದ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ಮತ್ತೆ ಆರಂಭಿಸಲಾಗಿದೆ. ಮೂರು ತಿಂಗಳಿಗೊಮ್ಮೆ<br />ಕುಡಿಯುವ ನೀರಿನ ಮಾದರಿ ಪರೀಕ್ಷೆ ಮಾಡಲಾಗುತ್ತಿದೆ. ಅಲ್ಲದೇ ತಾಲ್ಲೂಕಿನಲ್ಲಿ ಎಲ್ಲಿಯೂ ಹಕ್ಕಿಜ್ವರ ಕಂಡು<br />ಬಂದಿಲ್ಲ. ಹಾಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಇಲಾಖೆ ವತಿಯಿಂದ ಅಗತ್ಯ ಮುಂಜಾಗ್ರತೆ<br />ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಸದಸ್ಯ ಸತೀಶ್ ಮಾತನಾಡಿ, ಕಾರ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ತೊಂದರೆ<br />ಅನುಭವಿಸುತ್ತಿದ್ದು, ಕೂಡಲೇ ತಾತ್ಕಾಲಿಕವಾಗಿಯಾದರೂ ಒಬ್ಬರನ್ನು ನೇಮಕ ಮಾಡಬೇಕೆಂದು<br />ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿಎಚ್ಒ, ಗುರುವಾರದಿಂದಲೇ ಒಬ್ಬ ವೈದ್ಯರನ್ನು<br />ನಿಯೋಜಿಸಲಾಗುವುದು ಎಂದರು.</p>.<p>‘ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳು ಪ್ರಾರಂಭವಾಗಿವೆ. ಅಂತಿಮ ಪದವಿ, ದ್ವಿತೀಯ ಪಿಯುಸಿ ಹಾಗೂ<br />ಎಸ್ಸೆಸ್ಸೆಲ್ಸಿ ಸೇರಿ 800 ವಿದ್ಯಾರ್ಥಿಗಳಿಗೆ ಈಗಾಗಲೇ ಅವಕಾಶ ಮಾಡಿಕೊಡಲಾಗಿದೆ. ಹೊಸ ದಾಖಲಾತಿಗೆ<br />ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಒಂದು ಬಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೋವಿಡ್<br />ಪರೀಕ್ಷೆ ಮಾಡಿಸಿದ್ದು, ಯಾರಿಗೂ ಪಾಸಿಟಿವ್ ಪತ್ತೆಯಾಗಿಲ್ಲ. ವಿದ್ಯಾರ್ಥಿ ನಿಲಯಗಳೇ ಕ್ವಾರಂಟೈನ್<br />ಕೇಂದ್ರವಾಗಿದ್ದರಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ<br />ಸಹಾಯಕ ನಿರ್ದೇಶಕ ಎಚ್.ಎಂ.ಸತೀಶ್ ತಿಳಿಸಿದರು.</p>.<p>ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಸ್. ರವಿ ಮಾತನಾಡಿ, ಆಲೂಗಡ್ಡೆ ಬಿತ್ತನೆ ಬೀಜವನ್ನು<br />ಪಂಜಾಬ್ನ ಜಲಂದರ್ನಿಂದ ತರಿಸಲಾಗುತ್ತಿತ್ತು. ಆದರೆ ಈಗ ಸೋಮನಹಳ್ಳಿ ಕಾವಲಿನಲ್ಲಿ ‘ಕುಪ್ರಿ ಜ್ಯೋತಿ’<br />ಮತ್ತು ‘ಕುಪ್ರಿ ಹಿಮಾಲಿನಿ’ ಎಂಬ ಎರಡು ತಳಿ ಆಲೂಗಡ್ಡೆ ಅಂಗಾಂಶ ಕೃಷಿ ಮಾಡಲಾಗಿದೆ. ಇದರಲ್ಲಿ ಕುಪ್ರಿ<br />ಹಿಮಾಲಿನಿ ಉತ್ತಮವಾಗಿ ಬಂದಿದ್ದು, ಗಡ್ಡೆ ಬಿಡಲು ಪ್ರಾರಂಭವಾಗಿದೆ. ಅಂಗಾಂಶ ಕೃಷಿ ಮುಖಾಂತರ ಎಕರೆಗೆ 35 ಸಾವಿರ ಹಾಗೂ ಹೆಕ್ಟೇರ್ಗೆ 1 ಲಕ್ಷ ಆಲೂಗಡ್ಡೆ ಸಸಿ ಅಗತ್ಯವಿದೆ. ವಿಯಾಟ್ನಂ ತಂತ್ರಜ್ಞಾನ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಜಿಲ್ಲೆ ಆಲೂಗಡ್ಡೆ ಬಿತ್ತನೆ ಬೀಜದಲ್ಲಿ ಸ್ವಾವಲಂಬಿಯಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಎಚ್.ಕೆ.ರಂಜಿನಿ, ಉಪಾಧ್ಯಕ್ಷೆ ಬೇಬಿ, ಕಾರ್ಯನಿರ್ವಾಹಕ ಅಧಿಕಾರಿ<br />ಕೆ.ಎಲ್. ಯಶ್ವಂತ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>