‘ಮಂಗಳೂರು–ಬೆಂಗಳೂರು ನಡುವೆ ಮಡಿಕೇರಿ ಮಾರ್ಗದ ಸಂಪಾಜೆ ಮಾರ್ಗ, ಬಿಸಿಲೆ ಘಾಟ್ ಮಾರ್ಗ ಎಲ್ಲವೂ ಬಂದ್ ಆಗಿರುವುದರಿಂದ ಉಂಟಾಗಿರುವ ಸಮಸ್ಯೆ ಹೇಳ ತೀರದಾಗಿದೆ. ಈ ಭಾಗದ ಸಾವಿರು ಮಕ್ಕಳು ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳೂರು ಬಂದರು ಹಾಗೂ ಈ ಭಾಗಕ್ಕೆ ಸರಕು, ದಿನ ನಿತ್ಯದ ಅಗತ್ಯ ವಸ್ತುಗಳ ಸಾಗಣೆಗೆ ಅಡ್ಡಿಯಾಗಿದೆ. ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಬಸ್ಸುಗಳು ಹಾಗೂ ಲಘು ವಾಹನಗಳ ಸಂಚಾರಕ್ಕೆ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.