ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ ಪ್ರತಿಕ್ರಿಯಿಸಿ, ‘ಮೃತರಿಗೆ ಸಿಂಪ್ಟಮ್ ಎ ಇದ್ದ ಕಾರಣ ಎಸ್.ಅಂಕನಹಳ್ಳಿ ಕೋವಿಡ್ ಚಿಕಿತ್ಸಾ ಕೆಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದೆವು. ಬುಧವಾರ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಪಟ್ಟಣದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊಡಿಸಲು ಕರೆ ತಂದಿದ್ದರು. ಚಿಕಿತ್ಸೆ ನೀಡುವ ಮುನ್ನ ಸ್ಪಂದಿಸಿದ್ದರೆ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆಕಳುಹಿಸಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ’ ಎಂದರು.