<p><strong>ನುಗ್ಗೇಹಳ್ಳಿ:</strong> ‘ಹೋಬಳಿಯ ಚಿನ್ನೇನಹಳ್ಳಿಯ ಕಾವಲು ಹೊಸೂರು, ಬದ್ದಿಕೆರೆ ಹೊರಗಿನ 4.50 ಕಿ.ಮೀ ರಸ್ತೆಯನ್ನು ₹5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.</p>.<p>ಹೋಬಳಿಯ ಚಿನ್ನೇನಹಳ್ಳಿಯಲ್ಲಿ ₹5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಗ್ರಾಮಸ್ಥರ ಹಲವು ವರ್ಷಗಳ ಒತ್ತಾಯದಂತೆ ಚಿನ್ನೇನಹಳ್ಳಿಯಿಂದ ನುಗ್ಗೇಹಳ್ಳಿ- ಹಿರೀಸಾವೆ ಮುಖ್ಯ ರಸ್ತೆಯ ಕಾವಲು ಹೊಸೂರು ಗೇಟ್ವರೆಗೆ ಹಾಗೂ ಚಿನ್ನೇನಹಳ್ಳಿಯಿಂದ ಬದ್ದಿಕೆರೆವರೆಗಿನ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.</p>.<p>ಚಿನ್ನೇನಹಳ್ಳಿಯಲ್ಲಿ ಡೇರಿ ಕಟ್ಟಡ ಸೇರಿದಂತೆ ದೇವಾಲಯ ನಿರ್ಮಾಣಕ್ಕೆ ಹಾಗೂ ರಸ್ತೆ ಕುಡಿಯುವ ನೀರು ವ್ಯವಸ್ಥೆಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಶೇ 95ರಷ್ಟು ಪೂರ್ಣಗೊಂಡಿದ್ದು, ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ಚಿನ್ನನಹಳ್ಳಿ ಸೇರಿದಂತೆ ಈ ಭಾಗದ ಕೆರೆಗಳಿಗೆ ನೀರು ಹರಿಸಿ ತುಂಬಿಸಲು ಹೆಚ್ಚು ಶ್ರಮ ವಹಿಸುವುದಾಗಿ ತಿಳಿಸಿದರು.</p>.<p>ಜೆಡಿಎಸ್ ಯುವ ಮುಖಂಡ ರಾಮ ಮಾತನಾಡಿ, ಗ್ರಾಮದಲ್ಲಿ ರಸ್ತೆ ಸೇರಿದಂತೆ ದೇವಾಲಯ ನಿರ್ಮಾಣಕ್ಕೆ ಶಾಸಕರು ಹೆಚ್ಚಿನ ಅನುದಾನ ನೀಡಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಗ್ರಾಮದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಹೆಚ್ಚಿನ ಸಾಲ ಕೊಡಿಸಿದ್ದಾರೆ’ ಎಂದರು.</p>.<p>ಮುಖಂಡರಾದ ನಾಗೇಂದ್ರ ಬಾಬು, ಗ್ರಾ.ಪಂ ಅಧ್ಯಕ್ಷ ಜಯಲಕ್ಷ್ಮಿ ಶಂಕರ್, ಮಾಜಿ ತಾ.ಪಂ ಸದಸ್ಯ ಟಿ.ಪಿ.ಗಂಗಾಧರ್, ಮಾಜಿ ಗ್ರಾ.ಪಂ ಉಪಾಧ್ಯಕ್ಷ ರಾಜಪುರ ಮನು, ಪ್ರಮುಖರಾದ ಕಾವಲು ಹೊಸೂರು ಅಶೋಕ್, ಪಾರ್ಥಸಾಥಿ, ಹುಲಿಕೆರೆ ಸಂಪತ್ ಕುಮಾರ್, ಕಾವಲು ಹೊಸೂರು ಗೋಪಿ, ಗುತ್ತಿಗೆದಾರ ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನುಗ್ಗೇಹಳ್ಳಿ:</strong> ‘ಹೋಬಳಿಯ ಚಿನ್ನೇನಹಳ್ಳಿಯ ಕಾವಲು ಹೊಸೂರು, ಬದ್ದಿಕೆರೆ ಹೊರಗಿನ 4.50 ಕಿ.ಮೀ ರಸ್ತೆಯನ್ನು ₹5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.</p>.<p>ಹೋಬಳಿಯ ಚಿನ್ನೇನಹಳ್ಳಿಯಲ್ಲಿ ₹5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಗ್ರಾಮಸ್ಥರ ಹಲವು ವರ್ಷಗಳ ಒತ್ತಾಯದಂತೆ ಚಿನ್ನೇನಹಳ್ಳಿಯಿಂದ ನುಗ್ಗೇಹಳ್ಳಿ- ಹಿರೀಸಾವೆ ಮುಖ್ಯ ರಸ್ತೆಯ ಕಾವಲು ಹೊಸೂರು ಗೇಟ್ವರೆಗೆ ಹಾಗೂ ಚಿನ್ನೇನಹಳ್ಳಿಯಿಂದ ಬದ್ದಿಕೆರೆವರೆಗಿನ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.</p>.<p>ಚಿನ್ನೇನಹಳ್ಳಿಯಲ್ಲಿ ಡೇರಿ ಕಟ್ಟಡ ಸೇರಿದಂತೆ ದೇವಾಲಯ ನಿರ್ಮಾಣಕ್ಕೆ ಹಾಗೂ ರಸ್ತೆ ಕುಡಿಯುವ ನೀರು ವ್ಯವಸ್ಥೆಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಶೇ 95ರಷ್ಟು ಪೂರ್ಣಗೊಂಡಿದ್ದು, ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ಚಿನ್ನನಹಳ್ಳಿ ಸೇರಿದಂತೆ ಈ ಭಾಗದ ಕೆರೆಗಳಿಗೆ ನೀರು ಹರಿಸಿ ತುಂಬಿಸಲು ಹೆಚ್ಚು ಶ್ರಮ ವಹಿಸುವುದಾಗಿ ತಿಳಿಸಿದರು.</p>.<p>ಜೆಡಿಎಸ್ ಯುವ ಮುಖಂಡ ರಾಮ ಮಾತನಾಡಿ, ಗ್ರಾಮದಲ್ಲಿ ರಸ್ತೆ ಸೇರಿದಂತೆ ದೇವಾಲಯ ನಿರ್ಮಾಣಕ್ಕೆ ಶಾಸಕರು ಹೆಚ್ಚಿನ ಅನುದಾನ ನೀಡಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಗ್ರಾಮದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಹೆಚ್ಚಿನ ಸಾಲ ಕೊಡಿಸಿದ್ದಾರೆ’ ಎಂದರು.</p>.<p>ಮುಖಂಡರಾದ ನಾಗೇಂದ್ರ ಬಾಬು, ಗ್ರಾ.ಪಂ ಅಧ್ಯಕ್ಷ ಜಯಲಕ್ಷ್ಮಿ ಶಂಕರ್, ಮಾಜಿ ತಾ.ಪಂ ಸದಸ್ಯ ಟಿ.ಪಿ.ಗಂಗಾಧರ್, ಮಾಜಿ ಗ್ರಾ.ಪಂ ಉಪಾಧ್ಯಕ್ಷ ರಾಜಪುರ ಮನು, ಪ್ರಮುಖರಾದ ಕಾವಲು ಹೊಸೂರು ಅಶೋಕ್, ಪಾರ್ಥಸಾಥಿ, ಹುಲಿಕೆರೆ ಸಂಪತ್ ಕುಮಾರ್, ಕಾವಲು ಹೊಸೂರು ಗೋಪಿ, ಗುತ್ತಿಗೆದಾರ ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>