ಎಚ್.ಡಿ.ಕುಮಾರಸ್ವಾಮಿ– ಯಡಿಯೂರಪ್ಪ ನಡುವೆ ಒಳ ಒಪ್ಪಂದ ಆಗಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ‘ ಕುಮಾರಸ್ವಾಮಿ ಅವರು ಬಿಜೆಪಿಗೆ ಜೆಡಿಎಸ್ ಪಕ್ಷ ಬರೆದು ಕೊಡುತ್ತೇವೆ ಎಂದಿಲ್ಲ, ಬಿಜೆಪಿ ಜತೆ ಸೇರಿ ಸರ್ಕಾರ ಮಾಡುತ್ತೇವೆ ಎಂದೂ ಹೇಳಿಲ್ಲ. ನೆರೆ ಸಂತ್ರಸ್ತರ ಹಿತದೃಷ್ಟಿಯಿಂದ ಬಿಜೆಪಿ ಸರ್ಕಾರ ಮುಂದುವರಿಯಲಿ ಎಂದಿದ್ದಾರಷ್ಟೆ. ಕೆಎಂಎಫ್ ಅಧ್ಯಕ್ಷರ ಚುನಾವಣೆಯಲ್ಲಿ ಯಡಿಯೂರಪ್ಪ ಮನೆಗೆ ನಿರ್ದೇಶಕರನ್ನು ಕಳಿಸಿದ್ದು ಯಾರು? ಒಳ ಒಪ್ಪಂದ ಆಗಿದರೇ ನಾನೇ ಯಡಿಯೂರಪ್ಪ ಬಳಿ ಹೋಗಬಹುದಿತ್ತು. ವಿರೋಧ ಪಕ್ಷದ ನಾಯಕರಾಗಿರುವವರು ಜವಾಬ್ದಾರಿಯಿಂದ ಮಾತನಾಡಲಿ’ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.