ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಲ್ಲಿ ಕಾಡಾನೆ ದಾಳಿಯಿಂದ ವೃದ್ಧ ಸಾವು: ಗ್ರಾಮಸ್ಥರ ಪ್ರತಿಭಟನೆ

Last Updated 2 ಜುಲೈ 2022, 7:56 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಕಾಡಾನೆ–ಮಾನವನ ಸಂಘರ್ಷ ಮುಂದುವರಿದಿದ್ದು, ಶನಿವಾರ ಕಾಡಾನೆಗಳ ದಾಳಿಗೆ ಕೆಲಗಳಲೆ ಗ್ರಾಮದಲ್ಲಿ ವೃದ್ಧ ಮೃತಪಟ್ಟಿದ್ದಾರೆ.

ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೆಲಗಳಲೆ ಗ್ರಾಮದ ಕೃಷ್ಣೇಗೌಡ (67) ಮೃತ ವ್ಯಕ್ತಿ. ಬೆಳಿಗ್ಗೆ ಮಗ ಸುದೀಶ್, ಮೊಮ್ಮಗ ಪ್ರಥಮ್ ಜೊತೆ ತೋಟಕ್ಕೆ ತೆರಳುವ ವೇಳೆ ಏಕಾಏಕಿ ಮೂರು ಕಾಡಾನೆ ದಾಳಿ ಮಾಡಿವೆ.

ಕಾಡಾನೆ ಹಿಂಡು ಕಂಡ ಕೂಡಲೇ ಎಲ್ಲರೂ ಓಡಿದ್ದಾರೆ. ಈ ವೇಳೆ ಕೃಷ್ಣೇಗೌಡ ಕೆಳಗೆ ಬಿದ್ದಿದ್ದಾರೆ. ನಂತರ ಕಾಡಾನೆಗಳು ತುಳಿದು ಸಾಯಿಸಿದೆ.ಸುದೇಶ್ ಮತ್ತು ಪ್ರಥಮ್ ತಪ್ಪಿಸಿಕೊಂಡಿದ್ದಾರೆ.

ಸಾವಿಗೀಡಾದ ಕೃಷ್ಣೇಗೌಡ ಮನೆಯಲ್ಲಿ ಶೋಕ ಮಡುಗಟ್ಟಿದ್ದು, ಸಂಬಂಧಿಕರ ಆಕ್ರಂದನ ಮುಗಿಲು‌ ಮುಟ್ಟಿದೆ. ತೀವ್ರ ಆಕ್ರೋಶ ವ್ಯಕ್ತಪಡಿಸಿರುವ‌ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈಚೆಗಷ್ಟೇ ಒಂದು ಆನೆಯನ್ನು ಅರಣ್ಯ ಇಲಾಖೆಯಿಂದ ಸೆರೆಹಿಡಿಯಲಾಗಿತ್ತು. ಮತ್ತೊಂದು ಆನೆ ಸೆರೆಹಿಡಿಯಲು ಕಾರ್ಯಾಚರಣೆ ಮುಂದುವರಿದಿದ್ದು, ಈ ನಡುವೆ ವೃದ್ಧನ ಸಾವು ಸಂಭವಿಸಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT