ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 11ರ ಬಳಿಕ ವಿಂಗಡಿಸಿದ ಕಸ ಮಾತ್ರ ಸಂಗ್ರಹಿಸಿ’

ಅಧಿಕಾರಿಗಳಿಗೆ ಡಿ.ಸಿ ಆರ್‌. ಗಿರೀಶ್‌ ಸೂಚನೆ
Last Updated 3 ಫೆಬ್ರುವರಿ 2021, 2:05 IST
ಅಕ್ಷರ ಗಾತ್ರ

ಹಾಸನ: ‘ಒಣ ಮತ್ತು ಹಸಿ ಕಸವನ್ನು ಕಡ್ಡಾಯವಾಗಿ ವಿಂಗಡಿಸಿ ನೀಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆ. 10ರವರೆಗೆ ಅಭಿಯಾನದ ರೂಪದಲ್ಲಿ ಪ್ರಚಾರ ಮಾಡಲು ಕ್ರಮಕೈಗೊಳ್ಳಿ’ ಎಂದು ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ಸೋಮವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಫೆ. 11 ರಿಂದ ಕಡ್ಡಾಯವಾಗಿ ವಿಂಗಡಣೆ ಮಾಡಿದ ಕಸವನ್ನು ಮಾತ್ರ ಸಂಗ್ರಹಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

14 ಮತ್ತು 15 ನೇ ಹಣಕಾಸಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು 15 ದಿನಗಳಲ್ಲಿ ಕೆಲಸ ಪ್ರಾರಂಭಿಸಬೇಕು. ಜತೆಗೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಸ್.ಇ.ಪಿ ಮತ್ತು ಟಿ.ಎಸ್.ಪಿ ಯೋಜನೆಯ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರುವಂತಿಲ್ಲ. ಎಲ್ಲಾ ಮುಖ್ಯಾಧಿಕಾರಿಗಳು ಈ ಯೋಜನೆಯಡಿ ಅರ್ಹರಿಗೆ ಸವಲತ್ತನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ನಿಗಧಿ ಪಡಿಸಿರುವ ಅನುದಾನವನ್ನು ನಗರ ಪ್ರದೇಶದಲ್ಲಿರುವ ಅಂಗವಿಕಲರಿಗೆ ಅಗತ್ಯ ಸಲಕರಣೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಆಸ್ತಿ ತೆರಿಗೆ, ನೀರಿನ ಕರ ವಸೂಲಿ ಮತ್ತಿತರ ವಿಷಯಗಳ ಕುರಿತು ಪರಿಶೀಲಿಸಿ, ವಸೂಲಾತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ ಜಗದೀಶ್, ಹಾಸನ ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಅರಸೀಕೆರೆ ನಗರಸಭೆ ಆಯುಕ್ತ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಕೆ. ಶಿವಾನಂದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT