<p><strong>ಹಾಸನ</strong>: ನಗರದ ಹಿಮ್ಸ್ನಲ್ಲಿ ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯುವಂತೆ ಮತ್ತು ಜಿಲ್ಲೆಯ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಒತ್ತಾಯಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಸದಸ್ಯರು, ‘ನಗರದಲ್ಲಿ ಹಿಮ್ಸ್ ಆಡಳಿತ ವ್ಯಾಪ್ತಿಯಲ್ಲಿನ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸಬೇಕು. ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ ಅನುಗುಣವಾಗಿ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ನಮ್ಮ ಹಕ್ಕೊತ್ತಾಯದ ಭಾಗವಾಗಿ ಆಗಸ್ಟ್ 15ರಂದು ಹಿಮ್ಸ್ ನೂತನ ಆಸ್ಪತ್ರೆ ಕಟ್ಟಡದ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಆಗಸ್ಟ್ 14ರಂದು ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು’ ಎಂದರು.</p>.<p>ನಮ್ಮ 10 ಹಕ್ಕೊತ್ತಾಯಗಳನ್ನು ಅತ್ಯಂತ ತುರ್ತಾಗಿ, ಆದ್ಯತೆಯ ಮೇರೆಗೆ ಪರಿಗಣಿಸಬೇಕು. ಈ ಬೇಡಿಕೆಗಳು ಈಡೇರುವವರೆಗೆ ಹಾಗೂ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಬೇಡಿಕೆ ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.</p>.<p>ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ, ಮುಖಂಡರಾದ ಎಚ್.ಕೆ ಸಂದೇಶ್, ಎಂ.ಸೋಮಶೇಖರ್, ಟಿ.ಆರ್. ವಿಜಯ್ ಕುಮಾರ್, ರಾಜಶೇಖರ್, ಅಂಬುಗ ಮಲ್ಲೇಶ್, ಪೃಥ್ವಿ ಎಂ.ಜಿ., ಬಿ.ಸಿ ರಾಜೇಶ್, ಹರೀಶ್, ಇಂದ್ರೇಶ್, ರಾಜೇಶ್, ರವಿ ಬಸವಾಪುರ, ಮಂಜು ತೇಜೂರ್, ಸತೀಶ್ ಕೆ.ಎಂ., ಪುಟ್ಟರಾಜು ಇತರರು ಇದ್ದರು.</p>.<p>Quote - ಎಲ್ಲ ಶಿಕ್ಷಣ ಔದ್ಯೋಗಿಕ ಸಂಸ್ಥೆ ಘಟಕಗಳಲ್ಲಿ ಹಾಗೂ ಇಲಾಖೆಗಳಲ್ಲಿ ಮಾನಸಿಕ ಒತ್ತಡ ನಿರ್ವಹಣೆಗೆ ಅನುಕೂಲವಾಗುವಂತೆ ಕನಿಷ್ಠ ಒಬ್ಬರು ತಜ್ಞ ಆಪ್ತ ಸಮಾಲೋಚಕರನ್ನು ನೇಮಿಸಬೇಕು ಧರ್ಮೇಶ್ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಹಿಮ್ಸ್ನಲ್ಲಿ ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯುವಂತೆ ಮತ್ತು ಜಿಲ್ಲೆಯ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಒತ್ತಾಯಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಸದಸ್ಯರು, ‘ನಗರದಲ್ಲಿ ಹಿಮ್ಸ್ ಆಡಳಿತ ವ್ಯಾಪ್ತಿಯಲ್ಲಿನ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸಬೇಕು. ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ ಅನುಗುಣವಾಗಿ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ನಮ್ಮ ಹಕ್ಕೊತ್ತಾಯದ ಭಾಗವಾಗಿ ಆಗಸ್ಟ್ 15ರಂದು ಹಿಮ್ಸ್ ನೂತನ ಆಸ್ಪತ್ರೆ ಕಟ್ಟಡದ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಆಗಸ್ಟ್ 14ರಂದು ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು’ ಎಂದರು.</p>.<p>ನಮ್ಮ 10 ಹಕ್ಕೊತ್ತಾಯಗಳನ್ನು ಅತ್ಯಂತ ತುರ್ತಾಗಿ, ಆದ್ಯತೆಯ ಮೇರೆಗೆ ಪರಿಗಣಿಸಬೇಕು. ಈ ಬೇಡಿಕೆಗಳು ಈಡೇರುವವರೆಗೆ ಹಾಗೂ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಬೇಡಿಕೆ ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.</p>.<p>ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ, ಮುಖಂಡರಾದ ಎಚ್.ಕೆ ಸಂದೇಶ್, ಎಂ.ಸೋಮಶೇಖರ್, ಟಿ.ಆರ್. ವಿಜಯ್ ಕುಮಾರ್, ರಾಜಶೇಖರ್, ಅಂಬುಗ ಮಲ್ಲೇಶ್, ಪೃಥ್ವಿ ಎಂ.ಜಿ., ಬಿ.ಸಿ ರಾಜೇಶ್, ಹರೀಶ್, ಇಂದ್ರೇಶ್, ರಾಜೇಶ್, ರವಿ ಬಸವಾಪುರ, ಮಂಜು ತೇಜೂರ್, ಸತೀಶ್ ಕೆ.ಎಂ., ಪುಟ್ಟರಾಜು ಇತರರು ಇದ್ದರು.</p>.<p>Quote - ಎಲ್ಲ ಶಿಕ್ಷಣ ಔದ್ಯೋಗಿಕ ಸಂಸ್ಥೆ ಘಟಕಗಳಲ್ಲಿ ಹಾಗೂ ಇಲಾಖೆಗಳಲ್ಲಿ ಮಾನಸಿಕ ಒತ್ತಡ ನಿರ್ವಹಣೆಗೆ ಅನುಕೂಲವಾಗುವಂತೆ ಕನಿಷ್ಠ ಒಬ್ಬರು ತಜ್ಞ ಆಪ್ತ ಸಮಾಲೋಚಕರನ್ನು ನೇಮಿಸಬೇಕು ಧರ್ಮೇಶ್ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>