ಈ ಸಂಬಂಧ ಜಿಲ್ಲಾಧ್ಯಕ್ಷ ಎಂ.ಕೆ.ಆರ್. ಸೋಮಶೇಖರ್ ನೇತೃತ್ವದ ನಿಯೋಗ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರಿಗೆ ಮನವಿ ಸಲ್ಲಿಸಿ,ಸೆ.14 ರಂದು ಹಿಂದಿ ದಿವಸ್ ಆಚರಿಸುವ ಕುರಿತು ಕೇಂದ್ರ ಹೊರಡಿಸಿರುವ ಪ್ರಕಟಣೆಗೆ ರಾಜ್ಯ ಸರ್ಕಾರ ಬೆಂಬಲ ಸೂಚಿಸಿದೆ. ಭಾರತದ ಸಂವಿಧಾನ 350ನೇ ವಿಧಿ ಪ್ರಕಾರ, ಪ್ರತಿ ರಾಜ್ಯ ಸರ್ಕಾರ ಆಡಳಿತ ಭಾಷೆಯಾಗಿ ತನ್ನ ಮಾತೃಭಾಷೆಯನ್ನೆ ಬಳಸಬೇಕು ಹಾಗೂ ಕಡ್ಡಾಯವಾಗಿ ಅಲ್ಲಿನ ಮಕ್ಕಳಿಗೆ ಮತ್ತು ನಾಗರಿಕರಿಗೆ ಶಿಕ್ಷಣದಲ್ಲಿ ಸಾರ್ವತ್ರಿಕವಾಗಿ ತನ್ನ ಮಾತೃಭಾಷೆಗೆ ಒತ್ತು ನೀಡಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದೆ ಎಂದು ತಿಳಿಸಿದರು.