<p><strong>ಹಾಸನ</strong>: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ<br />ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಶನಿವಾರ ಪ್ರತಿಭಟನೆ<br />ನಡೆಸಲಾಯಿತು.</p>.<p>ಬಿಜೆಪಿ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣವಾಗಿ<br />ವಿಫಲವಾಗಿದೆ. ಅಧಿಕವಾಗಿ ತೆರಿಗೆ ವಿಧಿಸಿ ಲೂಟಿ ಮಾಡುತ್ತಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ<br />ಏರಿಕೆ ಆಗುತ್ತಲೇ ಇದೆ. ದೇಶದಲ್ಲಿ ಆಡಳಿತ ನಡೆಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.</p>.<p>ಉತ್ತಮ ಆರೋಗ್ಯ, ಕುಡಿಯುವ ನೀರು, ಮನೆ, ಪರಿಸರ, ಶಿಕ್ಷಣ ಹಾಗೂ ಉದ್ಯೋಗ<br />ಕಲ್ಪಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ, ಇಂದು ಸರ್ಕಾರಿ ವಲಯದ ಅನೇಕ ಸಂಸ್ಥೆಗಳನ್ನು<br />ಖಾಸಗೀಕರಣ ಮಾಡಲಾಗುತ್ತಿದೆ. ಶ್ರೀಮಂತರು ಶ್ರೀಮಂತರಾಗಿಯೇ ಬಡವರು ಬಡವರಾಗಿಯೇ<br />ಇರುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಕಳೆದ 70 ವರ್ಷಗಳಿಂದ ದೇಶದಲ್ಲಿ ಕೂಡಿಟ್ಟಿದ್ದ ಸಂಪತ್ತನ್ನು ಬಿಜೆಪಿ ಸರ್ಕಾರ 7 ವರ್ಷದಲ್ಲಿ ಸರ್ವನಾಶ<br />ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ ಸ್ವಚ್ಛ ಭಾರತ್ ಅಭಿಯಾನ, ಸಬ್ ಕಾ<br />ಸಾತ್ ಸಬ್ ಕಾ ವಿಕಾಸ್ ಘೋಷಣೆಗಳು ಅವರಿಗೆ ವಿರುದ್ಧವಾಗಿವೆ. ಜನವಿರೋಧಿ ನೀತಿಗಳನ್ನು ಜಾರಿ<br />ಮಾಡುತ್ತಿರುವ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ರೋಸಿ ಹೋಗಿದ್ದಾರೆ. ಜನ ಸಾಮಾನ್ಯರ ಕಷ್ಟ,<br />ಸಮಸ್ಯೆ ಅರ್ಥ ಮಾಡಿಕೊಂಡು ಆಡಳಿತ ನಡೆಸುತ್ತಿಲ್ಲ. ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ<br />ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಪಿಸಿಸಿ ಸ್ತ್ರೀ ಶಕ್ತಿ ಸಂಘಟನಾ ಸಂಯೋಜಕಿ ಅಕ್ಕಯ್ ಪದ್ಮಶಾಲಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ತಾರ ಚಂದನ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ರಂಗೇಗೌಡ, ಮರ್ಕುಲಿ ಗೋಪಾಲೇಗೌಡ, ವಿನೋದ್, ಪಿ.ಎಸ್. ಜಮೀಲಾ, ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ<br />ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಶನಿವಾರ ಪ್ರತಿಭಟನೆ<br />ನಡೆಸಲಾಯಿತು.</p>.<p>ಬಿಜೆಪಿ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣವಾಗಿ<br />ವಿಫಲವಾಗಿದೆ. ಅಧಿಕವಾಗಿ ತೆರಿಗೆ ವಿಧಿಸಿ ಲೂಟಿ ಮಾಡುತ್ತಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ<br />ಏರಿಕೆ ಆಗುತ್ತಲೇ ಇದೆ. ದೇಶದಲ್ಲಿ ಆಡಳಿತ ನಡೆಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.</p>.<p>ಉತ್ತಮ ಆರೋಗ್ಯ, ಕುಡಿಯುವ ನೀರು, ಮನೆ, ಪರಿಸರ, ಶಿಕ್ಷಣ ಹಾಗೂ ಉದ್ಯೋಗ<br />ಕಲ್ಪಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ, ಇಂದು ಸರ್ಕಾರಿ ವಲಯದ ಅನೇಕ ಸಂಸ್ಥೆಗಳನ್ನು<br />ಖಾಸಗೀಕರಣ ಮಾಡಲಾಗುತ್ತಿದೆ. ಶ್ರೀಮಂತರು ಶ್ರೀಮಂತರಾಗಿಯೇ ಬಡವರು ಬಡವರಾಗಿಯೇ<br />ಇರುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಕಳೆದ 70 ವರ್ಷಗಳಿಂದ ದೇಶದಲ್ಲಿ ಕೂಡಿಟ್ಟಿದ್ದ ಸಂಪತ್ತನ್ನು ಬಿಜೆಪಿ ಸರ್ಕಾರ 7 ವರ್ಷದಲ್ಲಿ ಸರ್ವನಾಶ<br />ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ ಸ್ವಚ್ಛ ಭಾರತ್ ಅಭಿಯಾನ, ಸಬ್ ಕಾ<br />ಸಾತ್ ಸಬ್ ಕಾ ವಿಕಾಸ್ ಘೋಷಣೆಗಳು ಅವರಿಗೆ ವಿರುದ್ಧವಾಗಿವೆ. ಜನವಿರೋಧಿ ನೀತಿಗಳನ್ನು ಜಾರಿ<br />ಮಾಡುತ್ತಿರುವ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ರೋಸಿ ಹೋಗಿದ್ದಾರೆ. ಜನ ಸಾಮಾನ್ಯರ ಕಷ್ಟ,<br />ಸಮಸ್ಯೆ ಅರ್ಥ ಮಾಡಿಕೊಂಡು ಆಡಳಿತ ನಡೆಸುತ್ತಿಲ್ಲ. ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ<br />ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಪಿಸಿಸಿ ಸ್ತ್ರೀ ಶಕ್ತಿ ಸಂಘಟನಾ ಸಂಯೋಜಕಿ ಅಕ್ಕಯ್ ಪದ್ಮಶಾಲಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ತಾರ ಚಂದನ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ರಂಗೇಗೌಡ, ಮರ್ಕುಲಿ ಗೋಪಾಲೇಗೌಡ, ವಿನೋದ್, ಪಿ.ಎಸ್. ಜಮೀಲಾ, ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>