ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಮತಾಂತರಗೊಂಡಿದ್ದ ವೃದ್ಧೆಯ ಅಂತ್ಯಕ್ರಿಯೆಗೆ ವಿರೋಧ

Last Updated 12 ಫೆಬ್ರುವರಿ 2021, 2:11 IST
ಅಕ್ಷರ ಗಾತ್ರ

ಹೆತ್ತೂರು (ಹಾಸನ ಜಿಲ್ಲೆ): ಮತಾಂತರಗೊಂಡಿದ್ದ ವೃದ್ಧೆಯೊಬ್ಬರ ಅಂತ್ಯಕ್ರಿಯೆಯನ್ನು, ಪರಿಶಿಷ್ಟ ಜಾತಿಯವರಿಗೆ ಮೀಸಲಾದ ಸ್ಮಶಾನದಲ್ಲಿ ನಡೆಸಲು ಹೋಬಳಿಯ ವಳ್ಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಹಿರಿಯೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಪುಟ್ಟಮ್ಮ ಎಂಬುವವರು ಅನಾರೋಗ್ಯದಿಂದ ಸೋಮವಾರ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಗಾಗಿ, ಸ್ಮಶಾನದಲ್ಲಿ ಸಿದ್ಧತೆ ನಡೆದಿತ್ತು. ಆಗ, ಗ್ರಾಮಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ‘ಹಿಂದೂ ಪದ್ಧತಿಯಂತೆ ಅಂತ್ಯಕ್ರಿಯೆ ಮಾಡುವುದಾದರೆ ಮಾತ್ರ ಇಲ್ಲಿ ಮಾಡಿ; ಇಲ್ಲದಿದ್ದಲ್ಲಿ ಬೇಡ’ ಎಂದು ತಾಕೀತು ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ತುಸು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು, ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಕೊನೆಗೆ, ವೃದ್ಧೆಯ ಅಂತ್ಯಕ್ರಿಯೆಯನ್ನು ಅವರ ಕುಟುಂಬದವರು ಖಾಸಗಿ ಜಾಗದಲ್ಲಿ ನೆರವೇರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT