<p>ಅರಸೀಕೆರೆ: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಸಮುದಾಯದವರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸಾವಿರಾರು ಮುಸ್ಲಿಮರು ನಗರದ ಸುನ್ನಿ ಜಾಮಿಯಾ ಮಸೀದಿ ಮುಂಭಾಗದಿಂದ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ತಹಶೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ನಗರಸಭೆ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಮೀಲ್ ಮಾತನಾಡಿ, ‘ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಅಲ್ಪಸಂಖ್ಯಾತರನ್ನು ಅವಮಾನಿಸುವುದು, ಅವರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು’ ಎಂದು ಒತ್ತಾಯಿಸಿದರು.</p>.<p>ನಗರಸಭೆ ಅಧ್ಯಕ್ಷ ಎಂ.ಸಮಿವುಲ್ಲಾ ಮಾತನಾಡಿ, ‘ಮಸೂದೆಯನ್ನು ತಕ್ಷಣ ವಾಪಸ್ ಪಡೆಯದಿದ್ದರೆ ರಸ್ತೆಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.</p>.<p>ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಎ.ಪಿ. ಚಂದ್ರಯ್ಯ, ಸುನ್ನಿ ಮುಸ್ಲಿಂ ಜಮಾತ್ ಕಮಿಟಿ ಅಧ್ಯಕ್ಷ ಸೈಯದ್ ರಫೀಕ್, ಉಪಾಧ್ಯಕ್ಷ ನೂರ್ ಮೊಹಮ್ಮದ್, ಶರೀಫ್ ಸೈಯದ್, ನಜಿರುದ್ದೀನ್, ಕಾರ್ಯದರ್ಶಿ ರಿಯಾಜ್ ಪಾಶ, ನವಾಜ್ ಪಾಷಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಸಮುದಾಯದವರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸಾವಿರಾರು ಮುಸ್ಲಿಮರು ನಗರದ ಸುನ್ನಿ ಜಾಮಿಯಾ ಮಸೀದಿ ಮುಂಭಾಗದಿಂದ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ತಹಶೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ನಗರಸಭೆ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಮೀಲ್ ಮಾತನಾಡಿ, ‘ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಅಲ್ಪಸಂಖ್ಯಾತರನ್ನು ಅವಮಾನಿಸುವುದು, ಅವರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು’ ಎಂದು ಒತ್ತಾಯಿಸಿದರು.</p>.<p>ನಗರಸಭೆ ಅಧ್ಯಕ್ಷ ಎಂ.ಸಮಿವುಲ್ಲಾ ಮಾತನಾಡಿ, ‘ಮಸೂದೆಯನ್ನು ತಕ್ಷಣ ವಾಪಸ್ ಪಡೆಯದಿದ್ದರೆ ರಸ್ತೆಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.</p>.<p>ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಎ.ಪಿ. ಚಂದ್ರಯ್ಯ, ಸುನ್ನಿ ಮುಸ್ಲಿಂ ಜಮಾತ್ ಕಮಿಟಿ ಅಧ್ಯಕ್ಷ ಸೈಯದ್ ರಫೀಕ್, ಉಪಾಧ್ಯಕ್ಷ ನೂರ್ ಮೊಹಮ್ಮದ್, ಶರೀಫ್ ಸೈಯದ್, ನಜಿರುದ್ದೀನ್, ಕಾರ್ಯದರ್ಶಿ ರಿಯಾಜ್ ಪಾಶ, ನವಾಜ್ ಪಾಷಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>