ಈ ವೇಳೆ ಜೆಡಿಎಸ್– ಬಿಜೆಪಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ಟ್ರಕ್ ಟರ್ಮಿನಲ್ ವಿಚಾರವಾಗಿ ಬೆಳಿಗ್ಗೆಯಿಂದ ಸಂಜೆವರೆಗೂ ನಡೆದ ಪ್ರತಿಭಟನೆ, ಕಾಮಗಾರಿಗೆ ತಡೆ, ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ನಡುವಿನಜಟಾಪಟಿ ನಿಯಂತ್ರಿಸಲು ಜಿಲ್ಲಾಧಿಕಾರಿ ಆರ್.ಗಿರೀಶ್ ನಿಷೇಧಾಜ್ಞೆ ಅಸ್ತ್ರಪ್ರಯೋಗಿಸುವ ಮೂಲಕ ಸಂಘರ್ಷಕ್ಕೆ ತಾತ್ಕಾಲಿಕ ಅಂತ್ಯ ಹಾಡಿದರು. ಇದುಮೇಲ್ನೋಟಕ್ಕೆ ರೇವಣ್ಣ ಅವರ ಪ್ರತಿರೋಧಕ್ಕೆ ಜಯ ದೊರೆಂತಂತಾಯಿತು.