ವಿದ್ಯಾರ್ಥಿಗಳಿಗೆ, ಶಾಲಾ-ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿಗೆ ಮೊದಲ ಆದ್ಯತೆ ನೀಡಿ ಎಂದು ಸರ್ಕಾರವೇ ಸೂಚನೆ ನೀಡಿರುವುದರಿಂದ ಆ ನಿಟ್ಟನಲ್ಲಿ ಗಮನ ಹರಿಸಲಾಗಿದೆ. ಈ ನಡುವೆ ಸೂಕ್ತ ಮಾಹಿತಿ ಇಲ್ಲದೆ ಜನರು ಸಾಲುಗಟ್ಟುತ್ತಿರುವ ಹಿನ್ನೆಲೆಯಲ್ಲಿ ದಿನಕ್ಕೆ ಎಷ್ಟುಮಂದಿಗೆ ಲಸಿಕೆ ಕೊಡಬಹುದು ಎಂದು ಟೋಕನ್ ವ್ಯವಸ್ಥೆ ಜಾರಿ ಮಾಡುವಂತೆಸಂಬಂಧಪಟ್ಟವರಿಗೆ ಸೂಚಿಸಲಾಗುವುದು ಎಂದು ವಿವರಿಸಿದರು.