ಬಿಜೆಪಿ ನಾಯಕರು ಆರೋಪ ಮಾಡಿದ ತಕ್ಷಣ ಯಾವುದೇ ದೂರುಗಳು ಇಲ್ಲದಿದ್ದರೂ ಆಯೋಗದ ನೀತಿ, ನಿಯಮ ಉಲ್ಲಂಘಿಸಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗ ಮಾಡಲಾಗುತ್ತಿದೆ. ಉದಾಹರಣೆಗೆ ವಿಜಯಪುರ ಜಿಲ್ಲಾಧಿಕಾರಿ ಅವರನ್ನು ಸಕಾರಣ ಇಲ್ಲದೆ ವರ್ಗ ಮಾಡಲಾಗಿದೆ. ರಾಜ್ಯದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.