<p><strong>ಹಾಸನ: </strong>ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಶೇಕಡಾ 19 ಹೆಚ್ಚು ಮಳೆಯಾಗಿದ್ದು, ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದುಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದಅವರು, ಜೂನ್ ತಿಂಗಳಲ್ಲಿ ವಾಡಿಕೆ ಮಳೆ 88.3ಸೆಂ. ಮೀ ಮಳೆ ಪೈಕಿ 105.5 ಸೆಂ.ಮೀಮಳೆಯಾಗಿದೆ. ಶೇ 19 ರಷ್ಟು ಹೆಚ್ಚುಮಳೆಯಾಗಿದೆ. ಆಲೂರು, ಬೇಲೂರುಮತ್ತು ಸಕಲೇಶಪುರ ತಾಲ್ಲೂಕಿನಲ್ಲಿ ಉತ್ತಮಮಳೆಯಾಗಿದ್ದು, ಸಕಲೇಶಪುರ ತಾಲ್ಲೂಕಿನಲ್ಲಿವಾಡಿಕೆಗಿಂತ ಶೇಕಡಾ 89ರಷ್ಟು ಹೆಚ್ಚು ಮಳೆ<br />ಸುರಿದಿದೆ. ಜನ, ಜಾನುವಾರು ಪ್ರಾಣಹಾನಿಯಾಗಿಲ್ಲ. ಎಂಟು ಮನೆಗಳು ಭಾಗಶಃ ಕುಸಿದಿದ್ದು, ಪರಿಹಾರ ನೀಡಲಾಗುವುದು ಎಂದು ವಿವರಿಸಿದರು.</p>.<p>ಸಕಲೇಶಪುರದ ಹಾನುಬಾಳು ಸಮೀಪದದೋನಹಳ್ಳಿ ಹಳ್ಳ ಸೇತುವೆ ಕುಸಿದಿದ್ದು , ಸೇತುವೆದುರಸ್ತಿಗೆ ₹50 ಲಕ್ಷ ವೆಚ್ಚದ ಅಂದಾಜು ಪಟ್ಟಿತಯಾರಿಸಿ ಪಂಚಾಯತ್ ರಾಜ್ ಇಲಾಖೆಗೆಪ್ರಸ್ತಾವನೆ ಸಲ್ಲಿಸಲಾಗಿದೆ.ಮಳೆ, ಗಾಳಿಯಿಂದಾಗಿ 135 ವಿದ್ಯುತ್ ಕಂಬಗಳುಹಾನಿಗೊಳಗಾಗಿದ್ದು, ಬಹುತೇಕ ಎಲ್ಲಾ ಕಂಬಗಳ ದುರಸ್ತಿ ಮಾಡಲಾಗಿದೆ ಎಂದರು.</p>.<p>ಅಪಾಯಕಾರಿ ಗಿಡ, ಮರಗಳನ್ನು ತೆರವುಗೊಳಿಸುವಂತೆ ಸೆಸ್ಕ್ ಹಾಗೂ ಅರಣ್ಯಇಲಾಖೆಗೆ ಸೂಚನೆ ನೀಡಲಾಗಿದೆ.ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.</p>.<p>ಪ್ರವಾಹದಿಂದ ಹಾನಿಗೊಳಗಾಗಿರುವ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅದರ ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.ಆಗಸ್ಟ್ ತಿಂಗಳ ಮೊದಲ ಹಾಗೂ ಎರಡನೇವಾರದಲ್ಲಿ ಹೆಚ್ಚು ಮಳೆಯಾಗುವುದರಿಂದ ಈಗಿನಿಂದಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕೊರೊನಾ ಪಾಸಿಟಿವಿಟಿ ಶೇಕಡಾ 7 ರಷ್ಟು ಇದೆ.ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಿತ್ಯ6500ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆ ಮಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಶೇಕಡಾ 19 ಹೆಚ್ಚು ಮಳೆಯಾಗಿದ್ದು, ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದುಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದಅವರು, ಜೂನ್ ತಿಂಗಳಲ್ಲಿ ವಾಡಿಕೆ ಮಳೆ 88.3ಸೆಂ. ಮೀ ಮಳೆ ಪೈಕಿ 105.5 ಸೆಂ.ಮೀಮಳೆಯಾಗಿದೆ. ಶೇ 19 ರಷ್ಟು ಹೆಚ್ಚುಮಳೆಯಾಗಿದೆ. ಆಲೂರು, ಬೇಲೂರುಮತ್ತು ಸಕಲೇಶಪುರ ತಾಲ್ಲೂಕಿನಲ್ಲಿ ಉತ್ತಮಮಳೆಯಾಗಿದ್ದು, ಸಕಲೇಶಪುರ ತಾಲ್ಲೂಕಿನಲ್ಲಿವಾಡಿಕೆಗಿಂತ ಶೇಕಡಾ 89ರಷ್ಟು ಹೆಚ್ಚು ಮಳೆ<br />ಸುರಿದಿದೆ. ಜನ, ಜಾನುವಾರು ಪ್ರಾಣಹಾನಿಯಾಗಿಲ್ಲ. ಎಂಟು ಮನೆಗಳು ಭಾಗಶಃ ಕುಸಿದಿದ್ದು, ಪರಿಹಾರ ನೀಡಲಾಗುವುದು ಎಂದು ವಿವರಿಸಿದರು.</p>.<p>ಸಕಲೇಶಪುರದ ಹಾನುಬಾಳು ಸಮೀಪದದೋನಹಳ್ಳಿ ಹಳ್ಳ ಸೇತುವೆ ಕುಸಿದಿದ್ದು , ಸೇತುವೆದುರಸ್ತಿಗೆ ₹50 ಲಕ್ಷ ವೆಚ್ಚದ ಅಂದಾಜು ಪಟ್ಟಿತಯಾರಿಸಿ ಪಂಚಾಯತ್ ರಾಜ್ ಇಲಾಖೆಗೆಪ್ರಸ್ತಾವನೆ ಸಲ್ಲಿಸಲಾಗಿದೆ.ಮಳೆ, ಗಾಳಿಯಿಂದಾಗಿ 135 ವಿದ್ಯುತ್ ಕಂಬಗಳುಹಾನಿಗೊಳಗಾಗಿದ್ದು, ಬಹುತೇಕ ಎಲ್ಲಾ ಕಂಬಗಳ ದುರಸ್ತಿ ಮಾಡಲಾಗಿದೆ ಎಂದರು.</p>.<p>ಅಪಾಯಕಾರಿ ಗಿಡ, ಮರಗಳನ್ನು ತೆರವುಗೊಳಿಸುವಂತೆ ಸೆಸ್ಕ್ ಹಾಗೂ ಅರಣ್ಯಇಲಾಖೆಗೆ ಸೂಚನೆ ನೀಡಲಾಗಿದೆ.ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.</p>.<p>ಪ್ರವಾಹದಿಂದ ಹಾನಿಗೊಳಗಾಗಿರುವ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅದರ ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.ಆಗಸ್ಟ್ ತಿಂಗಳ ಮೊದಲ ಹಾಗೂ ಎರಡನೇವಾರದಲ್ಲಿ ಹೆಚ್ಚು ಮಳೆಯಾಗುವುದರಿಂದ ಈಗಿನಿಂದಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕೊರೊನಾ ಪಾಸಿಟಿವಿಟಿ ಶೇಕಡಾ 7 ರಷ್ಟು ಇದೆ.ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಿತ್ಯ6500ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆ ಮಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>