ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ಜಿಲ್ಲೆಯ ಹಿರೇಸಾವೆಯಲ್ಲಿ ವಿದ್ಯುತ್ ಆಘಾತ: ನವಿಲು ಸಾವು

Last Updated 21 ಆಗಸ್ಟ್ 2020, 11:25 IST
ಅಕ್ಷರ ಗಾತ್ರ

ಹಿರೀಸಾವೆ: ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ಹಿರೀಸಾವೆಯಲ್ಲಿ ಶುಕ್ರವಾರ ಮೃತಪಟ್ಟಿದೆ.

ಎರಡು ಹೆಣ್ಣು ನವಿಲುಗಳು ಆಹಾರ ಹುಡುಕಿಕೊಂಡು ರೈಲ್ವೆ ಹಳಿಗಳ ಪಕ್ಕ ಬಂದಿದ್ದವು. ಒಂದು ವರ್ಷದ ಹೆಣ್ಣು ನವಿಲು ವಿದ್ಯುತ್ ಪರಿವರ್ತಕದ ಪಕ್ಕದಲ್ಲಿ ಹಾರುವಾಗ ವಿದ್ಯುತ್ ತಂತಿಗೆ ಸ್ಪ‍ರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ. ವಿಷಯ ತಿಳಿದ ಹಿರೀಸಾವೆ ಠಾಣೆ ಪೊಲೀಸರು ಮತ್ತು ಚನ್ನರಾಯಪಟ್ಟಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಡಾ.ಸುಬ್ರಹ್ಮಣ್ಯ ಅವರು ನವಿಲಿನ ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯ ಉಪ ಸಂರಕ್ಷಣಾಧಿಕಾರಿ ವಿಶ್ವನಾಥ್, ಅರಣ್ಯ ರಕ್ಷಕ ಕರೀಗೌಡ ಅವರು ನವಿಲಿನ ಅಂತ್ಯಸಂಸ್ಕಾರ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT