<p><strong>ಹಾಸನ:</strong> ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ತಂಡ, ಚೇತನ್ ಹಾಗೂ ಲಿಖಿತ್ ಎಂಬುವವರನ್ನು ಭಾನುವಾರ ಬಂಧಿಸಿದೆ.</p>.<p>ನಗರದ ಎನ್.ಆರ್. ವೃತ್ತದಲ್ಲಿರುವ ಸೆನ್ ಪೊಲೀಸ್ ಠಾಣೆಯಲ್ಲಿ ಇಬ್ಬರನ್ನೂ ವಿಚಾರಣೆ ಒಳಪಡಿಸಿದ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡರು. ಬಂಧಿತರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ.</p>.<p>ಹಾಸನ ತಾಲ್ಲೂಕಿನ ಯಲಗುಂದ ಗ್ರಾಮದ ಚೇತನ್ ನಿವಾಸದಲ್ಲಿ ಒಂದೂವರೆ ಗಂಟೆ ಸ್ಥಳ ಮಹಜರು ನಡೆಸಿ, ಹೇಳಿಕೆ ಪಡೆಯಲಾಯಿತು. ಮತ್ತೊಬ್ಬ ಆರೋಪಿ ಲಿಖಿತ್ನನ್ನು ಶ್ರವಣಬೆಳಗೊಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು.</p>.<p>ಏ.21 ರಂದು ಪೆನ್ಡ್ರೈವ್ ಹಂಚಿಕೆಯಾಗಿದ್ದು, ಆ ಕುರಿತು ಜೆಡಿಎಸ್ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿಯವರು, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ನವೀನ್ಗೌಡ, ಚೇತನ್ ಹಾಗೂ ಲಿಖಿತ್ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.</p>.<p>ಲೈಂಗಿಕ ದೌರ್ಜನ್ಯ, ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಜಿ.ದೇವರಾಜೇಗೌಡರನ್ನು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ತಂಡ, ಚೇತನ್ ಹಾಗೂ ಲಿಖಿತ್ ಎಂಬುವವರನ್ನು ಭಾನುವಾರ ಬಂಧಿಸಿದೆ.</p>.<p>ನಗರದ ಎನ್.ಆರ್. ವೃತ್ತದಲ್ಲಿರುವ ಸೆನ್ ಪೊಲೀಸ್ ಠಾಣೆಯಲ್ಲಿ ಇಬ್ಬರನ್ನೂ ವಿಚಾರಣೆ ಒಳಪಡಿಸಿದ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡರು. ಬಂಧಿತರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ.</p>.<p>ಹಾಸನ ತಾಲ್ಲೂಕಿನ ಯಲಗುಂದ ಗ್ರಾಮದ ಚೇತನ್ ನಿವಾಸದಲ್ಲಿ ಒಂದೂವರೆ ಗಂಟೆ ಸ್ಥಳ ಮಹಜರು ನಡೆಸಿ, ಹೇಳಿಕೆ ಪಡೆಯಲಾಯಿತು. ಮತ್ತೊಬ್ಬ ಆರೋಪಿ ಲಿಖಿತ್ನನ್ನು ಶ್ರವಣಬೆಳಗೊಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು.</p>.<p>ಏ.21 ರಂದು ಪೆನ್ಡ್ರೈವ್ ಹಂಚಿಕೆಯಾಗಿದ್ದು, ಆ ಕುರಿತು ಜೆಡಿಎಸ್ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿಯವರು, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ನವೀನ್ಗೌಡ, ಚೇತನ್ ಹಾಗೂ ಲಿಖಿತ್ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.</p>.<p>ಲೈಂಗಿಕ ದೌರ್ಜನ್ಯ, ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಜಿ.ದೇವರಾಜೇಗೌಡರನ್ನು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>