ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೆನ್ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಬಿಜೆಪಿ ಮಾಜಿ ಶಾಸಕರು ಹಾಗೂ ಅವರ ಆಪ್ತ ಸಹಾಯಕರ ಪಾತ್ರ ಇದ್ದು, ಈಗಾಗಲೇ ಎಸ್ಐಟಿ ತಂಡ 18 ಕಡೆ ದಾಳಿ ನಡೆಸಿ ಪೆನ್ಡ್ರೈವ್, ಹಾರ್ಡ್ ಡಿಸ್ಕ್ ಹಾಗೂ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿರುವುದೇ ಇದಕ್ಕೆ ಸಾಕ್ಷಿ’ ಎಂದು ತಿಳಿಸಿದರು.