ಕುಮಾರಸ್ವಾಮಿ ನೀಡಿರುವ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದಾರೆ. ಪಾಪ ಕಾಂಗ್ರೆಸ್ನವರು ಹತಾಶರಾಗಿದ್ದಾರೆ. ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ, ಅವರ ರಾಜಕೀಯ ಮುಗಿದೇ ಹೋಯಿತು. ಇನ್ನೇನಿದ್ದರೂ ನಾನೆ ಎನ್ನುವ ಭ್ರಮೆಯಲ್ಲಿ ಇದ್ದರು. ಕುಮಾರಸ್ವಾಮಿ ಮಂಡ್ಯದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಗೆಲುವು ಸಾಧಿಸಿ ಕೇಂದ್ರದಲ್ಲಿ ಸಚಿವರಾಗಲಿದ್ದಾರೆ. ನಂತರ ನಮ್ಮ ಅಸ್ತಿತ್ವ ಇರುವುದಿಲ್ಲ ಎಂಬ ಭಯ ಕಾಂಗ್ರೆಸ್ಸಿಗರಿಗೆ ಕಾಡುತ್ತಿದೆ ಎಂದು ತಿರುಗೇಟು ನೀಡಿದರು.