ಟ್ರಸ್ಟ್ ಅಧ್ಯಕ್ಷ ಎಂ.ಕೆ. ಭಾಸ್ಕರ್ ರಾವ್ ಮಾತನಾಡಿ, ‘ಕೊರೊನಾ ಮಾದರಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ
ದಮನ ಮಾಡಲು ಕಾಣದ ಶಕ್ತಿಗಳು ಕೆಲಸ ಮಾಡುತ್ತಿವೆ. 75ರ ದಶಕದಲ್ಲಿ ಪತ್ರಿಕೋದ್ಯಮ ಸವಾಲಿನ ಸಂದರ್ಭವಾಗಿತ್ತು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾ ಗಾಂಧಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂಪೂರ್ಣ ದಮನ ಮಾಡಿದ್ದರು. ನೊಂದವರ, ಹಿಂದುಳಿದವರ, ಸಮಾಜದಲ್ಲಿ ಶೋಷಿತರ, ರೈತರ, ಬಡವರ ಮೇಲೆ ನಡೆಯುತ್ತಿದ್ದ ದೌರ್ಜನ್ಯಗಳನ್ನು ಖಂಡಿಸುವ ನಿಟ್ಟಿನಲ್ಲಿ ಪತ್ರಿಕೋದ್ಯಮದ ಪಾತ್ರ ಅಪಾರ’ ಎಂದು ನುಡಿದರು.