ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಹಾಸನದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆ

Last Updated 11 ಮೇ 2022, 7:07 IST
ಅಕ್ಷರ ಗಾತ್ರ

ಹಾಸನ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಬಂಧಿತರಾಗಿರುವ ಹೊಳೆನರಸೀಪುರ ಅಭ್ಯರ್ಥಿ ಮನು ಕುಮಾರ್ ಅವರ ಅಣ್ಣ ವಾಸು (36) ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ವಾಸು ಅವರನ್ನು ಇತ್ತೀಚೆಗೆ ಕೆಲಸದಿಂದ ವಜಾ ಮಾಡಲಾಗಿತ್ತು.

ತಮ್ಮನ ಪಿಎಸ್‌ಐ ಕೆಲಸಕ್ಕೆಂದು ಮಧ್ಯವರ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ಹೊಂದಿಸಿಕೊಟ್ಟಿದ್ದರು ಕೊಟ್ಟಿದ್ದಾರೆ ಎಂದು ಹೇಳಲಾಗಿದೆ. ಹಣವೂ ಹೊಯ್ತು, ತಮ್ಮನ ಕೆಲಸವೂ ಹೊಯ್ತು ಅಂತ ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

‘ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಗನನ್ನು ಕೆಲಸದಿಂದ ತೆಗೆಯಲಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಮೃತನ ತಾಯಿ ಶಿವಮ್ಮ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT