<p><strong>ಹಾಸನ:</strong> ‘ರಾಗಿ ಖರೀದಿ ಪ್ರಮಾಣ ಹೆಚ್ಚಿಸಬೇಕು ರೈತರ ಬೇಡಿಕೆ ಬಗ್ಗೆ ಕೇಂದ್ರಸರ್ಕಾರ ಚಿಂತನೆ ನಡೆಸಿದೆ. ಖರೀದಿ ಕೇಂದ್ರ ಆರಂಭಿಸುವ ಬಗ್ಗೆ ರಾಜ್ಯಸರ್ಕಾರದ ಜತೆ ಚರ್ಚಿಸಲಾಗುವುದು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.</p>.<p>ಕಾರೆಕೆರೆ ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದಕರ್ನಾಟಕ ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ‘ನನ್ನ ಪಾಲಿಸಿ ನನ್ನ ಕೈಯಲ್ಲಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ವಿಶ್ವಸಂಸ್ಥೆ ಸಹಯೋಗದಲ್ಲಿ ರಾಗಿ, ಸಿರಿಧಾನ್ಯಗಳಿಗೆ ಅಂತರರಾಷ್ಟ್ರೀಯವಾಗಿ ಮಾರುಕಟ್ಟೆ ಸೃಷ್ಟಿಸಲು ಒತ್ತು ನೀಡಲಾಗುವುದು. 2023ರೊಳಗೆ ಎಲ್ಲ ರಾಯಭಾರಿ ಕಚೇರಿಗಳಲ್ಲಿ ರಾಗಿ, ಜೋಳ, ಸಿರಿಧಾನ್ಯ ಪ್ರದರ್ಶನ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಒಂದೊಂದು ಕಡೆ ಇವೆ. ರೈತರಿಗೆ ಕೃಷಿ, ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿಎರಡೂ ವಿಷಯಗಳ ಬಗ್ಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಬೇಕು’ ಎಂದೂ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.</p>.<p>‘ರೈತರು ಗುಣಮಟ್ಟದ ಸಿರಿಧಾನ್ಯ ಬೆಳೆಯಬೇಕು. ರಾಸಾಯನಿಕಸಿಂಪಡಣೆ ಅವಧಿ, ಪ್ರಮಾಣ ಕುರಿತು ಕೃಷಿಅಧಿಕಾರಿಗಳು ಮತ್ತು ವಿಜ್ಞಾನಿಗಳು ರೈತರಿಗೆ ಅರಿವು ಮೂಡಿಸಬೇಕು’ ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ರಾಗಿ ಖರೀದಿ ಪ್ರಮಾಣ ಹೆಚ್ಚಿಸಬೇಕು ರೈತರ ಬೇಡಿಕೆ ಬಗ್ಗೆ ಕೇಂದ್ರಸರ್ಕಾರ ಚಿಂತನೆ ನಡೆಸಿದೆ. ಖರೀದಿ ಕೇಂದ್ರ ಆರಂಭಿಸುವ ಬಗ್ಗೆ ರಾಜ್ಯಸರ್ಕಾರದ ಜತೆ ಚರ್ಚಿಸಲಾಗುವುದು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.</p>.<p>ಕಾರೆಕೆರೆ ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದಕರ್ನಾಟಕ ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ‘ನನ್ನ ಪಾಲಿಸಿ ನನ್ನ ಕೈಯಲ್ಲಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ವಿಶ್ವಸಂಸ್ಥೆ ಸಹಯೋಗದಲ್ಲಿ ರಾಗಿ, ಸಿರಿಧಾನ್ಯಗಳಿಗೆ ಅಂತರರಾಷ್ಟ್ರೀಯವಾಗಿ ಮಾರುಕಟ್ಟೆ ಸೃಷ್ಟಿಸಲು ಒತ್ತು ನೀಡಲಾಗುವುದು. 2023ರೊಳಗೆ ಎಲ್ಲ ರಾಯಭಾರಿ ಕಚೇರಿಗಳಲ್ಲಿ ರಾಗಿ, ಜೋಳ, ಸಿರಿಧಾನ್ಯ ಪ್ರದರ್ಶನ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಒಂದೊಂದು ಕಡೆ ಇವೆ. ರೈತರಿಗೆ ಕೃಷಿ, ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿಎರಡೂ ವಿಷಯಗಳ ಬಗ್ಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಬೇಕು’ ಎಂದೂ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.</p>.<p>‘ರೈತರು ಗುಣಮಟ್ಟದ ಸಿರಿಧಾನ್ಯ ಬೆಳೆಯಬೇಕು. ರಾಸಾಯನಿಕಸಿಂಪಡಣೆ ಅವಧಿ, ಪ್ರಮಾಣ ಕುರಿತು ಕೃಷಿಅಧಿಕಾರಿಗಳು ಮತ್ತು ವಿಜ್ಞಾನಿಗಳು ರೈತರಿಗೆ ಅರಿವು ಮೂಡಿಸಬೇಕು’ ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>