‘ಅಮೃತ್ ಯೋಜನೆಗೆ ಪೈಪ್ಲೈನ್ ಅಳವಡಿಸಲು ರಸ್ತೆ ಅಗೆದು ಎರಡು ವರ್ಷ ಆಗಿದೆ. ಮಳೆಗಾಲ ಆರಂಭವಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಗುಂಡಿಬಿದ್ದಿವೆ. ಹೀಗಾಗಿ ಜನರು ಓಡಾಡಲು ತುಂಬಾ ತೊಂದರೆ ಆಗುತ್ತಿದೆ. ರಸ್ತೆ ದುರಸ್ತಿಮಾಡಲು ಶಾಸಕರಿಗೆ ಭಾನುವಾರದವರೆಗೂ ಗಡುವು ನೀಡಲಾಗಿತ್ತು. ಆದರೆ ಈವರೆಗೂರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭಿಸಿಲ್ಲದ್ದರಿಂದ ಹೊಸ ಲೈನ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು’ ಎಂದು ಹೇಳಿದರು.