‘300 ಜನರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆಯೆಂದು ಡಿಜಿಪಿ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಚಿತ್ರ ನಟಿ ಸುಮಲತಾ ಹಾಗೂ ನನ್ನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಅದಕ್ಕೂ ಮುನ್ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಾಗೂ ಅವರ ಜತೆ ಕೈ ಜೋಡಿಸಿರುವ ಅಧಿಕಾರಿಗಳ ಮೇಲೂ ಎಫ್ಐಆರ್ ದಾಖಲಿಸಿ, ನಂತರ ಸಿಬಿಐ ತನಿಖೆ ನಡೆಸಬೇಕು. ಇಲ್ಲವಾದರೆ ಅಧಿಕಾರಿಗಳು ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.