<p><strong>ಹಾಸನ</strong>: ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆ ಆಗುತ್ತದೆ ಎಂಬ ಆತಂಕದಲ್ಲಿ ತನ್ನ ಗಂಡ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪದಡಿ ಆರೋಪಿ ಚೈತ್ರಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಕೆರಳೂರು ಗ್ರಾಮದ ಗಜೇಂದ್ರ ಅವರು 11 ವರ್ಷಗಳ ಹಿಂದೆ ಚೈತ್ರಾಳನ್ನು ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. 3 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಗಂಜೇಂದ್ರ ಅವರೊಂದಿಗೆ ಜಗಳ ತೆಗೆಯುತ್ತಿದ್ದ ಚೈತ್ರಾ, ಗಂಡ, ಮಕ್ಕಳಿಗೆ ಬೈಯುತ್ತಿದ್ದಳು. ಈ ಮಧ್ಯೆ ಚೈತ್ರಾಳಿಗೆ, ಪುನೀತ್ ಎಂಬಾತನ ಜೊತೆ ಅನೈತಿಕ ಸಂಬಂಧ ಬೆಳೆದಿತ್ತು. ಈ ವಿಚಾರವನ್ನು ಚೈತ್ರಾಳ ತಂದೆ– ತಾಯಿಗೆ ತಿಳಿಸಿದ್ದು, ರಾಜಿ ಪಂಚಾಯ್ತಿ ಮಾಡಲಾಗಿತ್ತು.</p><p>2024 ರಿಂದ ಚೈತ್ರಾಳಿಗೆ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು. ಇದಕ್ಕೆ ಗಂಡ, ಮಕ್ಕಳು, ಅತ್ತೆ, ಮಾವ ತೊಂದರೆ ಆಗುತ್ತಾರೆ ಎಂದು ತಿಳಿದ ಚೈತ್ರಾ, ಕುಟುಂಬದವರಿಗೆ ತಿಳಿಯದಂತೆ ಊಟ, ತಿಂಡಿಯಲ್ಲಿ ವಿಷಕಾರಿ ಮಾತ್ರೆ ಹಾಕಿ ಕೊಲೆಗೆ ಯತ್ನಿಸಿದ್ದಾಳೆ. ಈ ಬಗ್ಗೆ ಅನುಮಾನಗೊಂಡ ಪತಿ ಗಜೇಂದ್ರ, ಬೇಲೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಚೈತ್ರಾಳನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆ ಆಗುತ್ತದೆ ಎಂಬ ಆತಂಕದಲ್ಲಿ ತನ್ನ ಗಂಡ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪದಡಿ ಆರೋಪಿ ಚೈತ್ರಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಕೆರಳೂರು ಗ್ರಾಮದ ಗಜೇಂದ್ರ ಅವರು 11 ವರ್ಷಗಳ ಹಿಂದೆ ಚೈತ್ರಾಳನ್ನು ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. 3 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಗಂಜೇಂದ್ರ ಅವರೊಂದಿಗೆ ಜಗಳ ತೆಗೆಯುತ್ತಿದ್ದ ಚೈತ್ರಾ, ಗಂಡ, ಮಕ್ಕಳಿಗೆ ಬೈಯುತ್ತಿದ್ದಳು. ಈ ಮಧ್ಯೆ ಚೈತ್ರಾಳಿಗೆ, ಪುನೀತ್ ಎಂಬಾತನ ಜೊತೆ ಅನೈತಿಕ ಸಂಬಂಧ ಬೆಳೆದಿತ್ತು. ಈ ವಿಚಾರವನ್ನು ಚೈತ್ರಾಳ ತಂದೆ– ತಾಯಿಗೆ ತಿಳಿಸಿದ್ದು, ರಾಜಿ ಪಂಚಾಯ್ತಿ ಮಾಡಲಾಗಿತ್ತು.</p><p>2024 ರಿಂದ ಚೈತ್ರಾಳಿಗೆ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು. ಇದಕ್ಕೆ ಗಂಡ, ಮಕ್ಕಳು, ಅತ್ತೆ, ಮಾವ ತೊಂದರೆ ಆಗುತ್ತಾರೆ ಎಂದು ತಿಳಿದ ಚೈತ್ರಾ, ಕುಟುಂಬದವರಿಗೆ ತಿಳಿಯದಂತೆ ಊಟ, ತಿಂಡಿಯಲ್ಲಿ ವಿಷಕಾರಿ ಮಾತ್ರೆ ಹಾಕಿ ಕೊಲೆಗೆ ಯತ್ನಿಸಿದ್ದಾಳೆ. ಈ ಬಗ್ಗೆ ಅನುಮಾನಗೊಂಡ ಪತಿ ಗಜೇಂದ್ರ, ಬೇಲೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಚೈತ್ರಾಳನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>