ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿನ ಮೇಲೆ ಪೊಲೀಸ್‌ ದಾಳಿ: ಮೊಬೈಲ್‌ ವಶ

Last Updated 19 ಜನವರಿ 2023, 8:00 IST
ಅಕ್ಷರ ಗಾತ್ರ

ಹಾಸನ: ನಗರದ ಜಿಲ್ಲಾ ಕಾರಾಗೃಹದ ಮೇಲೆ ಗುರುವಾರ ನಸುಕಿನ ಜಾವ ಪೊಲೀಸರು ದಾಳಿ ಮಾಡಿದ್ದಾರೆ.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈ‌ಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆದ ದಾಳಿಯಲ್ಲಿ ಮೊಬೈಲ್‌ ಫೋನ್‌ ಹಾಗೂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ಜೈಲಿನಿಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಕರೆ ಹೋಗಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಹಾಸನದ ಜೈಲಿನ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದಾರೆ. ಮೊಬೈಲ್‌ ಬಳಕೆ, ಮಾದಕ ವಸ್ತುಗಳನ್ನು ಪತ್ತೆ ಮಾಡಲಾಗಿದೆ.

80 ಕ್ಕೂ ಹೆಚ್ಚು ಪೊಲೀಸರು ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಕೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು ‌ಸೇವಿಸುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT