ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಗ್ಯ ಸುಧಾರಣೆ ಆಗುವವರೆಗೂ ರಾಜಕೀಯವಾಗಿ ಓಡಾಡುವುದಿಲ್ಲ. ಪಕ್ಷದ ಯಾವುದೇ ಸಭೆ ಕರೆದಿಲ್ಲ. ಎಚ್.ಡಿ. ಕುಮಾರಸ್ವಾಮಿ, ಬಂಡೆಪ್ಪ ಕಾಶಂಪುರ್ ಎಲ್ಲಾ ನೋಡಿಕೊಳ್ಳುತ್ತಿದ್ದಾರೆ. ಕೋವಿಡ್ ಕಾರಣದಿಂದ ಶ್ರಾವಣ ಮಾಸ ಮಾಡಲು ಸಾಧ್ಯವಾಗಲಿಲ್ಲ. ಕಾರ್ತಿಕ ಮಾಸದಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸುತ್ತೇನೆ ಎಂದರು.