<p><strong>ಆಲೂರು</strong>: ಸ್ಥಳೀಯ ಆಡಳಿತ ಮತ್ತು ಇಲಾಖೆಗಳು ರಸ್ತೆ ಸೇರಿದಂತೆ ಇತರೆ ಕಾಮಗಾರಿ ಪೂರ್ಣಗೊಳಿಸಿದ ನಂತರ ಕಾಲಕಾಲಕ್ಕೆ ನಿರ್ವಹಣೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p><p>ಸರಿಯಾದ ನಿರ್ವಹಣೆ ಇಲ್ಲವಾದರೆ ನಾನಾ ಅನಾಹುತಗಳಿಗೆ ಕಾರಣವಾಗುತ್ತದೆ. ರಸ್ತೆಗಳು ಗುಂಡಿ ಬಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಯಾರು ಜವಾಬ್ದಾರಿ ಎಂದು ಅವರು ಪ್ರಶ್ನಿಸಿದ್ದಾರೆ.</p><p>ರಸ್ತೆಗಳಲ್ಲಿ ಆಗುವ ಗುಂಡಿಗಳನ್ನು ಸಂಬಂಧಿಸಿದ ಇಲಾಖೆ ಗಮನಿಸಿ ಮುಚ್ಚಬೇಕು. ಇಲ್ಲವಾದರೆ ಅದೇ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಓಡಾಡುವ ಸಂದರ್ಭದಲ್ಲಿ ಗುಂಡಿಗಳು ಅಪಘಾತಗಳಿಗೆ ಕಾರಣವಾಗಲಿದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.</p><p>ಪಟ್ಟಣದ ಬಸ್ ನಿಲ್ದಾಣದ ಒಳ ಪ್ರವೇಶ ಮಾಡುವ ಸ್ಥಳದಲ್ಲಿ ಸುಮಾರು ಮೂರು ಅಡಿ ಅಗಲದ ಗುಂಡಿ ಬಿದ್ದಿದೆ. ಈ ಗುಂಡಿ ಎರಡು ದಿನಗಳಲ್ಲಿ ಮೂರು ಅಡಿ ಅಗಲವಾಗಿ ಆರು ಇಂಚು ಆಳವಾಗಿದೆ. ಇದೇ ರೀತಿ ಅಲ್ಲಲ್ಲಿ ಗುಂಡಿಗಳಾಗಿವೆ. ಮಿನಿ ವಿಧಾನಸೌಧ ಕಚೇರಿ, ಪೊಲೀಸ್ ಠಾಣೆ, ತಾಲ್ಲೂಕು ಪಂಚಾಯಿತಿ, ಪಶುವೈದ್ಯ ಆಸ್ಪತ್ರೆ ಇದೆ ಸುತ್ತಳತೆಯಲ್ಲಿದೆ. ಪ್ರತಿದಿನ ಸಾವಿರಾರು ಸಾರಿಗೆ ಬಸ್ಗಳು, ಇನ್ನಿತರ ವಾಹನಗಳು ಈ ರಸ್ತೆಯಲ್ಲಿ ಓಡಾಡುತ್ತವೆ. ಮಳೆಗಾಲವಾಗಿರುವುದರಿಂದ ಗುಂಡಿಯಲ್ಲಿ ನೀರು ನಿಂತು, ವಾಹನಗಳು ಚಲಿಸುವಾಗ ಗುಂಡಿಯಲ್ಲಿನ ಕಲುಷಿತ ನೀರು ಪಾದಚಾರಿಗಳಿಗೆ ಸೀರಲಿದೆ. ವಾಹನ ಸವಾರರು ಅಪಘಾತಕ್ಕೀಡಾಗುವ ಮತ್ತು ವಾಹನ ಹದಗೆಡುತ್ತದೆ ಎಂದು ವಾಹನ ಸವಾರರು ಅಸಮಾಧಾನ ಹೊರಹಾಕಿದ್ದಾರೆ.</p><p>ಪ್ರತಿಯೊಂದು ರಸ್ತೆಯಲ್ಲಿರುವ ಇಂತಹ ಗುಂಡಿಗಳನ್ನು ಪ್ರಾರಂಭಿಕ ಹಂತದಲ್ಲಿ ಮುಚ್ಚಿದರೆ ರಸ್ತೆಗಳು, ವಾಹನಗಳು ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡಬಹುದು ಎಂದು ಸಾರ್ವಜನಿಕರು ಸಂಬಂಧಿಸಿದ ಇಲಾಖೆಯನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು</strong>: ಸ್ಥಳೀಯ ಆಡಳಿತ ಮತ್ತು ಇಲಾಖೆಗಳು ರಸ್ತೆ ಸೇರಿದಂತೆ ಇತರೆ ಕಾಮಗಾರಿ ಪೂರ್ಣಗೊಳಿಸಿದ ನಂತರ ಕಾಲಕಾಲಕ್ಕೆ ನಿರ್ವಹಣೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p><p>ಸರಿಯಾದ ನಿರ್ವಹಣೆ ಇಲ್ಲವಾದರೆ ನಾನಾ ಅನಾಹುತಗಳಿಗೆ ಕಾರಣವಾಗುತ್ತದೆ. ರಸ್ತೆಗಳು ಗುಂಡಿ ಬಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಯಾರು ಜವಾಬ್ದಾರಿ ಎಂದು ಅವರು ಪ್ರಶ್ನಿಸಿದ್ದಾರೆ.</p><p>ರಸ್ತೆಗಳಲ್ಲಿ ಆಗುವ ಗುಂಡಿಗಳನ್ನು ಸಂಬಂಧಿಸಿದ ಇಲಾಖೆ ಗಮನಿಸಿ ಮುಚ್ಚಬೇಕು. ಇಲ್ಲವಾದರೆ ಅದೇ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಓಡಾಡುವ ಸಂದರ್ಭದಲ್ಲಿ ಗುಂಡಿಗಳು ಅಪಘಾತಗಳಿಗೆ ಕಾರಣವಾಗಲಿದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.</p><p>ಪಟ್ಟಣದ ಬಸ್ ನಿಲ್ದಾಣದ ಒಳ ಪ್ರವೇಶ ಮಾಡುವ ಸ್ಥಳದಲ್ಲಿ ಸುಮಾರು ಮೂರು ಅಡಿ ಅಗಲದ ಗುಂಡಿ ಬಿದ್ದಿದೆ. ಈ ಗುಂಡಿ ಎರಡು ದಿನಗಳಲ್ಲಿ ಮೂರು ಅಡಿ ಅಗಲವಾಗಿ ಆರು ಇಂಚು ಆಳವಾಗಿದೆ. ಇದೇ ರೀತಿ ಅಲ್ಲಲ್ಲಿ ಗುಂಡಿಗಳಾಗಿವೆ. ಮಿನಿ ವಿಧಾನಸೌಧ ಕಚೇರಿ, ಪೊಲೀಸ್ ಠಾಣೆ, ತಾಲ್ಲೂಕು ಪಂಚಾಯಿತಿ, ಪಶುವೈದ್ಯ ಆಸ್ಪತ್ರೆ ಇದೆ ಸುತ್ತಳತೆಯಲ್ಲಿದೆ. ಪ್ರತಿದಿನ ಸಾವಿರಾರು ಸಾರಿಗೆ ಬಸ್ಗಳು, ಇನ್ನಿತರ ವಾಹನಗಳು ಈ ರಸ್ತೆಯಲ್ಲಿ ಓಡಾಡುತ್ತವೆ. ಮಳೆಗಾಲವಾಗಿರುವುದರಿಂದ ಗುಂಡಿಯಲ್ಲಿ ನೀರು ನಿಂತು, ವಾಹನಗಳು ಚಲಿಸುವಾಗ ಗುಂಡಿಯಲ್ಲಿನ ಕಲುಷಿತ ನೀರು ಪಾದಚಾರಿಗಳಿಗೆ ಸೀರಲಿದೆ. ವಾಹನ ಸವಾರರು ಅಪಘಾತಕ್ಕೀಡಾಗುವ ಮತ್ತು ವಾಹನ ಹದಗೆಡುತ್ತದೆ ಎಂದು ವಾಹನ ಸವಾರರು ಅಸಮಾಧಾನ ಹೊರಹಾಕಿದ್ದಾರೆ.</p><p>ಪ್ರತಿಯೊಂದು ರಸ್ತೆಯಲ್ಲಿರುವ ಇಂತಹ ಗುಂಡಿಗಳನ್ನು ಪ್ರಾರಂಭಿಕ ಹಂತದಲ್ಲಿ ಮುಚ್ಚಿದರೆ ರಸ್ತೆಗಳು, ವಾಹನಗಳು ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡಬಹುದು ಎಂದು ಸಾರ್ವಜನಿಕರು ಸಂಬಂಧಿಸಿದ ಇಲಾಖೆಯನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>