ನೋಟೀಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆ ಹಾಜರಾಗುವಂತೆ ಇಬ್ಬರಿಗೂ ಸೂಚನೆ ನೀಡಿದೆ.
ಪೆನ್ಡ್ರೈವ್ ಹಂಚಿಕೆ ಸಂಬಂಧ ಏ.23 ರಂದು ಜೆಡಿಎಸ್ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ಹಾಸನದ ಸೈಬರ್ ಠಾಣೆಗೆ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ಗೌಡ ಹಾಗೂ ಚೇತನ್ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು.
ನಂತರ ಆರೋಪಿಗಳು ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು.
ಇನ್ನೊಂದೆಡೆ ಜೆಡಿಎಸ್ ಕೂಡ ಆರೋಪಿಗಳನ್ನು ಬಂಧಿಸಬೇಕು. ಈ ಪ್ರಕರಣದಲ್ಲಿ ಎಸ್ಐಟಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತ್ತು.
ಇದೀಗ ಎಸ್ಐಟಿಯಿಂದ ಜಿ. ದೇವರಾಜೇಗೌಡ ಹಾಗೂ ಕಾರ್ತಿಕ್ ಅವರಿಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಯ ನಂತರ ಪೆನ್ಡ್ರೈವ್ ಹಂಚಿಕೆ ಸಂಬಂಧ ಮಾಹಿತಿ ಲಭ್ಯವಾಗಬಹುದು ಎಂದು ಮೂಲಗಳು ತಿಳಿಸಿವೆ.