ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟವರು ಯಾರು ಎಂದು ಪ್ರಶ್ನಿಸಿದ ಗೋಪಾಲಸ್ವಾಮಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಗೆದ್ದರೆ ನಮಗೆ ಅವಮಾನವಾದಂತೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವೈದ್ಯರು, ಎಂಜಿನಿಯರ್ಗಳು, ಪೊಲೀಸ್ ಅಧಿಕಾರಿಗಳು ಡೈರಿಯಲ್ಲಿ ಕೆಲಸ ಮಾಡುವ ನೌಕರರು, ಜೆಡಿಎಸ್ ಕಾರ್ಯಕರ್ತರನ್ನು ಬಳಸಿಕೊಂಡಿರುವುದು ಸಣ್ಣ ಪುಟ್ಟ ತಪ್ಪೇ ಎಂದು ಪ್ರಶ್ನಿಸಿದರು.