‘ಪ್ರಜ್ವಲ್ ಮತ್ತು ಅವರ ತಾಯಿ ಭವಾನಿ ರೇವಣ್ಣ ಎರಡು ಕಂಪನಿಗಳಲ್ಲಿ ಶೇಕಡಾ 20 ರಿಂದ 25 ರಷ್ಟು ಪಾಲು ಹೊಂದಿದ್ದಾರೆ. ಆದರೆ, ಪ್ರಮಾಣ ಪತ್ರದಲ್ಲಿ ಈ ಅಂಶವನ್ನು ಮರೆ ಮಾಚಲಾಗಿದೆ. ಆದ ಕಾರಣ ಅಭ್ಯರ್ಥಿ ನಾಮಪತ್ರ ತಿರಸ್ಕೃತ ಮಾಡಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದೆ. ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ನ್ಯಾಯ ಸಿಗದಿದ್ದರೆ ಕೇಂದ್ರ ಚುನಾವಣಾ ಆಯೋಗ ಹಾಗೂ ಕಾನೂನು ಹೋರಾಟ ನಡೆಸಲಾಗುವುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.