‘ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಏನು ಕಡಿದು ಕಟ್ಟೆ ಹಾಕಿದ್ದಾರೆ. ಯಾವ ಶಾಲೆಗೆ ಹೋಗಿ ಪಾಠ ಮಾಡಿದ್ದಾರೆ. ಎಷ್ಟು ಸಭೆ ನಡೆಸಿದ್ದಾರೆ ಎಂಬುದನ್ನು ತೋರಿಸಲಿ. ಶಿಕ್ಷಕರಿಗೆ ಪರೀಕ್ಷೆ ನಡೆಸಲು ಹೋಗಿ ಅವರಿಂದಲೇ ವಿರೋಧ ಎದುರಿಸಿದರು. ಆದರೆ, ಭವಾನಿ ಹಲವು ಬಾರಿ ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಇದರ ಪರಿಣಾಮ ಅಗ್ರಸ್ಥಾನ ಬಂದಿದೆ. ಜತೆಗೆ ಶಿಕ್ಷಣಕ್ಕೆ ಒತ್ತು ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಪರಿಶ್ರಮವೂ ಇದೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.