ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಪಯ್ಯಗೆ ಅದ್ಧೂರಿ ಸ್ವಾಗತ

Last Updated 16 ಮೇ 2018, 12:32 IST
ಅಕ್ಷರ ಗಾತ್ರ

ವಿರಾಜಪೇಟೆ: ಸತತವಾಗಿ ವಿಧಾನಸಭೆಗೆ ಆಯ್ಕೆಯಾದ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಮಂಗಳವಾರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಪಟ್ಟಣಕ್ಕೆ ಬಂದ ಶಾಸಕ ಕೆ.ಜಿ. ಬೋಪಯ್ಯ ಅವರು, ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಕಾರ್ಯಕರ್ತರು ಭಾರಿ ಗಾತ್ರದ ಹೂವಿನ ಹಾರ ಹಾಕುವ
ಮೂಲಕ ಬರಮಾಡಿಕೊಂಡರು.

ಈ ಸಂದರ್ಭ ಸಂಗೀತ, ಬ್ಯಾಂಡ್ ಸೇರಿದಂತೆ ಪಟಾಕಿ ಸಿಡಿಸಿದ ಕಾರ್ಯಕರ್ತರು ಜೈಕಾರ ಕೂಗಿ ಸಿಹಿಹಂಚಿ ಸಂಭ್ರಮಿಸಿದರು.

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಕಾಫಿ ಮಂಡಳಿಯ ಉಪಾಧ್ಯಕ್ಷೆ ರೀನಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ನಗರ ಘಟಕದ ಅಧ್ಯಕ್ಷ ಎ. ಅನಿಲ್ ಮಂದಣ್ಣ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT