ವಿರಾಜಪೇಟೆ: ಸತತವಾಗಿ ವಿಧಾನಸಭೆಗೆ ಆಯ್ಕೆಯಾದ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಮಂಗಳವಾರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಪಟ್ಟಣಕ್ಕೆ ಬಂದ ಶಾಸಕ ಕೆ.ಜಿ. ಬೋಪಯ್ಯ ಅವರು, ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಕಾರ್ಯಕರ್ತರು ಭಾರಿ ಗಾತ್ರದ ಹೂವಿನ ಹಾರ ಹಾಕುವ
ಮೂಲಕ ಬರಮಾಡಿಕೊಂಡರು.
ಈ ಸಂದರ್ಭ ಸಂಗೀತ, ಬ್ಯಾಂಡ್ ಸೇರಿದಂತೆ ಪಟಾಕಿ ಸಿಡಿಸಿದ ಕಾರ್ಯಕರ್ತರು ಜೈಕಾರ ಕೂಗಿ ಸಿಹಿಹಂಚಿ ಸಂಭ್ರಮಿಸಿದರು.
ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಕಾಫಿ ಮಂಡಳಿಯ ಉಪಾಧ್ಯಕ್ಷೆ ರೀನಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ನಗರ ಘಟಕದ ಅಧ್ಯಕ್ಷ ಎ. ಅನಿಲ್ ಮಂದಣ್ಣ ಮತ್ತಿತರರು ಉಪಸ್ಥಿತರಿದ್ದರು.