ಸಕಲೇಶಪುರ, ಆಲೂರು, ಅರಕಲಗೋಡು, ಬೇಲೂರು ಮತ್ತು ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮಳೆಯಿಂದ ಸಾಕಷ್ಟು ಮನೆಗಳಿಗೆ ಹಾನಿ ಉಂಟಾಗಿದೆ. ರಸ್ತೆ, ಸೇತುವೆ ಕೊಚ್ಚಿ ಹೋಗಿವೆ. ವಿದ್ಯುತ್ ಕಂಬಗಳು ಬಿದ್ದಿವೆ. ಜೊತೆಗೆ ಸಾಕಷ್ಟು ಬೆಳೆ ಹಾನಿ ಉಂಟಾಗಿದ್ದು, ನಷ್ಟಕ್ಕೆ ಒಳಗಾದವರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.