ನಗರದಲ್ಲಿ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ಗೃಹ ಇಲಾಖೆಯನ್ನು ಮತ್ತಷ್ಟು ಬಲಪಡಿಸಬೇಕು. ಯಾವುದಾದರೂ ದುರ್ಘಟನೆ ನಡೆದರೆ ದೆಹಲಿಯಿಂದ ತಂಡ ಬರಲು ಎಂಟು ತಾಸು ಬೇಕು. ಗುಪ್ತಚರ ಇಲಾಖೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಹಿಂದೆ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟವಾಗಿದೆ. ಮಹಲ್ಗಳಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಕರೆಗಳು ಆಗಾಗ್ಗೆ ಬರುತ್ತಿರುತ್ತವೆ. ಹಾಗಾಗಿ ಹತ್ತು ವರ್ಷಗಳ ಹಿಂದೆಯೇ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು’ ಎಂದು ತಿಳಿಸಿದರು.