<p><strong>ಹಾಸನ: </strong>ಯಾವುದೇ ದುರಾಲೋಚನೆ ಹಾಗೂ ಪ್ರಭಾವಗಳಿಗೆ ಒಳಗಾಗದೇ ಧೈರ್ಯ ಮತ್ತು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುವುದು ಸಮಾಜಕ್ಕೆ ಕೊಡುವ ಒಂದು ಕೊಡುಗೆ ಎಂದು ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಿಶೋರ್ ಚಂದ್ರ ಹೇಳಿದರು.</p>.<p>ಗಾಡೇನಹಳ್ಳಿ ಪೊಲೀಸ್ ತರಬೇತಿ ಶಾಲೆ ಕವಾಯತು ಮೈದಾನ ಆವರಣದಲ್ಲಿ ನಡೆದ 3ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ಸರ್ಕಾರದ ಸೇವೆಗೆ ಸದಾ ಸನ್ನದ್ಧರಾಗಿರಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಬಡತನದಲ್ಲಿರುವವರಿಗೆ ಕಾನೂನಾತ್ಮಕ ಸಹಾಯ ನೀಡಿದಲ್ಲಿ ಮಾತ್ರವೇ ಪಥಸಂಚಲನಕ್ಕೆ ಅರ್ಥ ಬರುತ್ತದೆ ಎಂದು ತಿಳಿಸಿದರು.</p>.<p>ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು. ಸಮಾಜಕ್ಕೆ ಸಾಕಷ್ಟು ಅಧಿಕಾರಿಗಳು ಕರ್ತವ್ಯ ನಿಷ್ಠೆ ಸೇವೆ ಸಲ್ಲಿಸಿದ್ದಾರೆ. ಅಂತಹ ಅಧಿಕಾರಿಗಳನ್ನು ಆದರ್ಶವಾಗಿಟ್ಟುಕೊಂಡು ಕೆಲಸ ನಿರ್ವಹಿಸುವಂತೆ ಕಿವಿಮಾತು ಹೇಳಿದರು.</p>.<p>ಪೊಲೀಸ್ ತರಬೇತಿ ಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ನಂದಿನಿ ಮಾತನಾಡಿ, ಪ್ರಶಿಕ್ಷಾಣಾರ್ಥಿಗಳು 8 ತಿಂಗಳು ಯಶಸ್ವಿಯಾಗಿ ಒಳಾಂಗಣ ಮತ್ತು ಹೊರಾಂಗಣ ವಿಷಯದಲ್ಲಿ ಪಿಟಿ, ಕರಾಟೆ, ಲಾಠಿ ಡ್ರಿಲ್, ಗುಂಪು ಘರ್ಷಣೆ ನಿಯಂತ್ರಣ ಸೇರಿದಂತೆ ಇತರೆ ಕಾನೂನಾತ್ಮಕ ಹಾಗೂ ಉನ್ನತ ಮಟ್ಟದ ತರಬೇತಿ ಪಡೆದಿದ್ದಾರೆ ಎಂದು ವಿವರಿಸಿದರು.</p>.<p>ಕಾರವಾರ, ಮಂಗಳೂರು ನಗರ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ ಒಟ್ಟು 18 ಜಿಲ್ಲೆಗಳ ತರಬೇತಿ ಪಡೆದ ಒಟ್ಟು 392 ಪ್ರಶಿಕ್ಷಾಣಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ರಾಷ್ಟ್ರ ಧ್ವಜ ಹಾಗೂ ಪೊಲೀಸ್ ಧ್ವಜಗಳ ನಿರ್ಗಮನ ಪಥ ಸಂಚಲನವು ಗಮನ ಸೆಳೆಯಿತು.</p>.<p>ಪೊಲೀಸ್ ಮಹಾ ನೀರೀಕ್ಷಕ ಎಸ್.ರವಿ ಅವರು ಸ್ಮರಣ ಸಂಚಿಕೆ ಅನಾವರಣಗೊಳಿಸಿದರು. ಸರ್ವೋತ್ತಮ ಪ್ರಶಿಕ್ಷಾಣಾರ್ಥಿ ಕೃಷ್ಣಮೂರ್ತಿ ಕವಾಯತು ನಾಯಕತ್ವ ವಹಿಸಿದ್ದರು.</p>.<p>ಒಟ್ಟು 392 ಪ್ರಶಿಕ್ಷಾಣಾರ್ಥಿಗಳು ತರಬೇತಿ ಪಡೆದಿದ್ದು ಇವರಲ್ಲಿ 23 ಸ್ನಾತಕೋತ್ತರ ಪದವಿ, 25 ಬಿಎಸ್ಸಿ, 5 ಬಿ.ಇ, 262 ಪದವಿ, 4 ಡಿಪ್ಲೊಮಾ ಮತ್ತು 83 ಜನ ಪಿಯುಸಿ ಶಿಕ್ಷಣ ಪಡೆದಿದ್ದಾರೆ. ನಂದಿನಿ ಅವರು ಪ್ರಶಿಕ್ಷಾಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್, 11ನೇ ಪಡೆ ಕೆಎಸ್ಆರ್ ಪಿ ಕಮಾಂಡೆಂಟ್ ಕೃಷ್ಣಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಯಾವುದೇ ದುರಾಲೋಚನೆ ಹಾಗೂ ಪ್ರಭಾವಗಳಿಗೆ ಒಳಗಾಗದೇ ಧೈರ್ಯ ಮತ್ತು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುವುದು ಸಮಾಜಕ್ಕೆ ಕೊಡುವ ಒಂದು ಕೊಡುಗೆ ಎಂದು ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಿಶೋರ್ ಚಂದ್ರ ಹೇಳಿದರು.</p>.<p>ಗಾಡೇನಹಳ್ಳಿ ಪೊಲೀಸ್ ತರಬೇತಿ ಶಾಲೆ ಕವಾಯತು ಮೈದಾನ ಆವರಣದಲ್ಲಿ ನಡೆದ 3ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ಸರ್ಕಾರದ ಸೇವೆಗೆ ಸದಾ ಸನ್ನದ್ಧರಾಗಿರಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಬಡತನದಲ್ಲಿರುವವರಿಗೆ ಕಾನೂನಾತ್ಮಕ ಸಹಾಯ ನೀಡಿದಲ್ಲಿ ಮಾತ್ರವೇ ಪಥಸಂಚಲನಕ್ಕೆ ಅರ್ಥ ಬರುತ್ತದೆ ಎಂದು ತಿಳಿಸಿದರು.</p>.<p>ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು. ಸಮಾಜಕ್ಕೆ ಸಾಕಷ್ಟು ಅಧಿಕಾರಿಗಳು ಕರ್ತವ್ಯ ನಿಷ್ಠೆ ಸೇವೆ ಸಲ್ಲಿಸಿದ್ದಾರೆ. ಅಂತಹ ಅಧಿಕಾರಿಗಳನ್ನು ಆದರ್ಶವಾಗಿಟ್ಟುಕೊಂಡು ಕೆಲಸ ನಿರ್ವಹಿಸುವಂತೆ ಕಿವಿಮಾತು ಹೇಳಿದರು.</p>.<p>ಪೊಲೀಸ್ ತರಬೇತಿ ಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ನಂದಿನಿ ಮಾತನಾಡಿ, ಪ್ರಶಿಕ್ಷಾಣಾರ್ಥಿಗಳು 8 ತಿಂಗಳು ಯಶಸ್ವಿಯಾಗಿ ಒಳಾಂಗಣ ಮತ್ತು ಹೊರಾಂಗಣ ವಿಷಯದಲ್ಲಿ ಪಿಟಿ, ಕರಾಟೆ, ಲಾಠಿ ಡ್ರಿಲ್, ಗುಂಪು ಘರ್ಷಣೆ ನಿಯಂತ್ರಣ ಸೇರಿದಂತೆ ಇತರೆ ಕಾನೂನಾತ್ಮಕ ಹಾಗೂ ಉನ್ನತ ಮಟ್ಟದ ತರಬೇತಿ ಪಡೆದಿದ್ದಾರೆ ಎಂದು ವಿವರಿಸಿದರು.</p>.<p>ಕಾರವಾರ, ಮಂಗಳೂರು ನಗರ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ ಒಟ್ಟು 18 ಜಿಲ್ಲೆಗಳ ತರಬೇತಿ ಪಡೆದ ಒಟ್ಟು 392 ಪ್ರಶಿಕ್ಷಾಣಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ರಾಷ್ಟ್ರ ಧ್ವಜ ಹಾಗೂ ಪೊಲೀಸ್ ಧ್ವಜಗಳ ನಿರ್ಗಮನ ಪಥ ಸಂಚಲನವು ಗಮನ ಸೆಳೆಯಿತು.</p>.<p>ಪೊಲೀಸ್ ಮಹಾ ನೀರೀಕ್ಷಕ ಎಸ್.ರವಿ ಅವರು ಸ್ಮರಣ ಸಂಚಿಕೆ ಅನಾವರಣಗೊಳಿಸಿದರು. ಸರ್ವೋತ್ತಮ ಪ್ರಶಿಕ್ಷಾಣಾರ್ಥಿ ಕೃಷ್ಣಮೂರ್ತಿ ಕವಾಯತು ನಾಯಕತ್ವ ವಹಿಸಿದ್ದರು.</p>.<p>ಒಟ್ಟು 392 ಪ್ರಶಿಕ್ಷಾಣಾರ್ಥಿಗಳು ತರಬೇತಿ ಪಡೆದಿದ್ದು ಇವರಲ್ಲಿ 23 ಸ್ನಾತಕೋತ್ತರ ಪದವಿ, 25 ಬಿಎಸ್ಸಿ, 5 ಬಿ.ಇ, 262 ಪದವಿ, 4 ಡಿಪ್ಲೊಮಾ ಮತ್ತು 83 ಜನ ಪಿಯುಸಿ ಶಿಕ್ಷಣ ಪಡೆದಿದ್ದಾರೆ. ನಂದಿನಿ ಅವರು ಪ್ರಶಿಕ್ಷಾಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್, 11ನೇ ಪಡೆ ಕೆಎಸ್ಆರ್ ಪಿ ಕಮಾಂಡೆಂಟ್ ಕೃಷ್ಣಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>