ಸಭೆಗೆ ನಿರ್ಧಾರ: ನಗರದಲ್ಲಿ ಬೇಕಾಬಿಟ್ಟಿಯಾಗಿ ಆಟೋ ಬಾಡಿಗೆ ವಸೂಲಿ ಮಾಡುತ್ತಿರುವ ದೂರು ವ್ಯಾಪಕವಾಗಿ ಕೇಳಿಬಂದಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ನಿಟ್ಟಿನಲ್ಲಿ ನಗರದ ನೂತನ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಸಮೀಪ ಪ್ರಿಪೇಯ್ಡ್ ಆಟೋ ನಿಲ್ದಾಣವನ್ನು ತೆರೆಯುವ ಕುರಿತು ಸಾರ್ವಜನಿಕರು, ಆಟೋ ಮಾಲೀಕರು ಹಾಗೂ ಚಾಲಕರ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹರಿರಾಂ ಶಂಕರ್ ತಿಳಿಸಿದರು.