ವರ್ಷದ ಹಿಂದೆ ಈ ಸೇತುವೆ ಮೇಲಿನ ರಸ್ತೆ ತುಂಬಾ ಗುಂಡಿ ಬಿದ್ದಿತ್ತು. ಆದರೆ, ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳ ಹೋರಾಟದ ಫಲವಾಗಿ ಗುಂಡಿಗಳನ್ನು ಡಾಂಬರು ಹಾಕಿ ಮುಚ್ಚಲಾಯಿತು. ಬಿಟ್ಟರೆ ಉಳಿದ ಯಾವುದೇ ಕೆಲಸ ಮಾಡಿಲ್ಲ. ಡಾಂಬರು ಹಾಕಿದ ಮೇಲೆ ಭಾರಿ ವಾಹನಗಳು ಸೇತುವೆ ಮೇಲೆ ಸಂಚರಿಸುತ್ತಿದ್ದು, ತಳಪಾಯದ ಹಾಗೂ ತಡೆಗೋಡೆಯ ಕಲ್ಲುಗಳ ಉದುರುವಿಕೆ ಶುರುವಾಗಿದೆ. ಈಗಲಾದರೂ ಎಚ್ಚರವಹಿಸದಿದ್ದರೆ ಅಪಾಯ ತಪ್ಪಿದ್ದಲ್ಲ. ಇದರಿಂದ ಯಗಚಿ ಸೇತುವೆ ಅಪಾಯದ ಅಂಚಿನಲ್ಲಿದ್ದು, ಈ ಯಗಚಿ ಸೇತುವೆಯನ್ನು ಉಳಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಸಾರ್ವಜನಿಕು ಒತ್ತಾಯಿಸಿದ್ದಾರೆ.