ಹಾಸನ: ಸಮಾಜದ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಹಿಂದೂ ಜನ ಜಾಗೃತಿ ಸಂಸ್ಥೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಸ್ಥೆಯ ಜಿಲ್ಲಾ ಪ್ರಮುಖ್ ಗೋವಿಂದರಾಜ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಕೇರಳ ಮತ್ತು ದೆಹಲಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಈ ಕೃತ್ಯವನ್ನು ಪಿಎಫ್ಐ ಸಂಸ್ಥೆ ನಡೆಸಿದೆ ಎಂದು ಕೇರಳ ರಾಜ್ಯದ ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ. ಆದ್ದರಿಂದ ಈ ರೀತಿಯ ಘಟನೆಗಳು ನಡೆಯದಂತೆ ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಸ್ಥೆಯ ರಾಜೇಂದ್ರನ್, ಮಣಿ, ಪುಟ್ಟಸ್ವಾಮಿ, ಮೂರ್ತಿ, ಆನಂತ, ಕುಮಾರ್, ಸೋಮಣ್ಣ, ವೇಣುಗೋಪಾಲ್, ಮೇದಾವಿನಿ, ಪುಷ್ಪ ಇದ್ದರು.