ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ಅವರು, ನಿತ್ಯ ಮಹಾರಾಷ್ಟದಿಂದ ಚನ್ನರಾಯಪಟ್ಟಣ ತಾಲ್ಲೂಕಿಗೆ 6 ಬಸ್ ಹಾಗೂ ಕೇರಳದ ಮಾನಂದವಾಡಿಯಿಂದ ಅರಕಲಗೂಡು ತಾಲ್ಲೂಕಿಗೆ 2 ಬಸ್ ಬರುತ್ತಿದೆ. ಈ ಬಸ್ಗಳಲ್ಲಿ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲು ಕಾರ್ಯಾಚರಣೆಗಾಗಿ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿ, ಪ್ರಾದೇಶಿಕ ಸಾರಿಗೆ ಇಲಾಖೆ, ಪೋಲಿಸ್ ಇಲಾಖೆ ಒಳಗೊಂಡ ತಂಡ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.